ಭಾರತೀಯ ಸೇನೆಯಿಂದ ಹೈರಾಣಗಿ ಕಳೆದ ಕೆಲವು ದಿನಗಳಿಂದ ಬಿಲ ಸೇರಿದ್ದ ಭಯೋತ್ಪಾದಕರು, ಇದೀಗ ಮತ್ತೆ ಹೆಡೆ ಎತ್ತಿದಂತೆ ಕಾಣುತ್ತಿದೆ. ಹಲವು ದಿನಗಳಿಂದ ಬಚ್ಚಿಕೊಳ್ಳಲು ಜಾಗ ಸಿಗದೇ ಪರದಾಡುತ್ತಿದ್ದ ಲಷ್ಕರ್ ಉಗ್ರರು, ಇದೀಗ ಕಾಶಿ ವಿಶ್ವನಾಥ ದೇವಸ್ಥಾನ ಸ್ಫೋಟಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.
ಲಕ್ನೋ(ಜೂ.6): ಕಾಶಿ ವಿಶ್ವನಾಥ ಮತ್ತು ಕೃಷ್ಣ ಜನ್ಮಭೂಮಿ ಸ್ಫೋಟಿಸುವುದಾಗಿ ಲಷ್ಕರ್-ಎ-ತೋಯ್ಬಾ ಸಂಘಟನೆ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರ ಘೋಷಣೆ ಮಾಡಿದ್ದು, ರಾಜ್ಯದ ಪ್ರಮುಖ ಸ್ಥಳಗಳಿಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಎಲ್ಇಟಿ ಉಗ್ರ ಸಂಘಟನೆಯ ಕಮಾಂಡೆರ್ ಮೌಲಾನಾ ಅಂಬು ಶೇಖ್, ಕಳೆದ ತಿಂಗಳು ನೈರುತ್ಯ ರೈಲ್ವೇ ಗೆ ಪತ್ರ ರವಾನಿಸಿದ್ದು ಈ ಸಂಬಂಧ ಉತ್ತರಪ್ರದೇಶ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕಳೆದ ಮೇ 29 ರಂದು ದೆಹಲಿಯ ನೈರುತ್ಯ ರೈಲ್ವೆ ಈ ಪತ್ರವನ್ನು ಸ್ವಿಕರೀಸಿದ್ದು ಪತ್ರದಲ್ಲಿ ಶಹಾನಪುರ ಮತ್ತು ಹಪುರ್ ಸೇರಿದಂತೆ ಹಲವು ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಇದೇ ಜೂನ್ 8-10ರಂದು ಕೃಷ್ಣ ಜನ್ಮಭೂಮಿ ಮಥುರಾ ಮತ್ತು ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ.