
ನವದೆಹಲಿ[ಆ.27] ರಾಮ ಮಂದಿರ ನಿರ್ಮಾಣ ಸಂಬಂಧ ಮಾಧ್ಯಮಗಳ ಮುಂದೆ ಬಂದಿದ್ದ ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಗಳು ಇದೀಗ ಸಿಎಂ ಯೋಗಿ ಆದಿತ್ಯನಾಥ್ ಗೆ ಬರೆದ ಪತ್ರ ವಿವಾದ ಎಬ್ಬಿಸಿದೆ.
ಹಿರಿಯ ಪೊಲೀಸ್ ಅಧಿಕಾರಿ ಸುರ್ಯ ಕುಮಾರ್ ಶುಕ್ಲಾ ಸಿಎಂ ಗೆ ಪತ್ರ ಬರೆದಿದ್ದು ಖಾಲಿ ಇರುವ ನಾಲ್ಕು ಹುದ್ದೆಗಳಿಗೆ ಬೇಡಿಕೆ ಇಟ್ಟಿದ್ದಾರೆ.
ಜುಲೈ 23 ರಂದು ಅಧಿಕೃತ ಲೆಟರ್ ಹೆಡ್ ನಲ್ಲೇ ಬರೆದಿರುವ ಪತ್ರ ಇದೀಗ ಸೋರಿಕೆಯಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸರಕಾರದ ಪರವಾಗಿ ಬೇಕಾದರೆ ಕೆಲಸ ಮಾಡುತ್ತೇನೆ ಎಂದಿರುವ ಐಪಿಎಸ್ ಅಧಿಕಾರಿ ರಾಜ್ಯ ಯೋಜನಾ ಆಯೋಗ, ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.