
ಲಕ್ನೋ[ಅ.07]: ಶಿಕ್ಷಕರೆಂದರೆ ಮಕ್ಕಳಿಗೆ ಮಾದರಿಯಾಗಿರಬೇಕು. ಆದರೆ ಉತ್ತರ ಪ್ರದೇಶದ ಸೀತಾಪುರದ ಶಿಕ್ಷಕನೊಬ್ಬ ಕ್ಲಾಸಲ್ಲೇ ಕುಳಿತು ಬೀಡಿ ಸೇದಿ ಎಡವಟ್ಟು ಮಾಡಿಕೊಂಡಿದ್ದಾನೆ.
ಈತ ವಿದ್ಯಾರ್ಥಿಗಳ ಎದುರೇ ಕಡ್ಡಿ ಗೀರಿ ಬೀಡಿಗೆ ಬೆಂಕಿ ಹಚ್ಚಿ ಸೇದುವುದನ್ನು ಯಾರೋ ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದು, ಅದು ವೈರಲ್ ಆಗಿದೆ.
ಈ ವಿಷಯ ರಾಜ್ಯ ಶಿಕ್ಷಣ ಇಲಾಖೆ ಗಮನಕ್ಕೆ ಬಂದಿದ್ದು, ಕೂಡಲೇ ಇಲಾಖೆಯು ಶಿಕ್ಷಕನನ್ನು ಪತ್ತೆ ಹಚ್ಚಿ ಆತನಿಗೆ ಸಸ್ಪೆಂಡ್ ಶಿಕ್ಷೆ ವಿಧಿಸಿದೆ. ಶಿಕ್ಷಕರು ಧೂಮಪಾನ ಮಾಡಬಾರದು. ಅದೂ, ಮಕ್ಕಳ ಎದುರಲ್ಲಂತೂ ಮಾಡಲೇಬಾರದು’ ಎಂದಿದ್ದಾರೆ ಶಿಕ್ಷಣಾಧಿಕಾರಿಗಳು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.