ಚೆನ್ನೈನ ಅರಿವಳಯಂನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಆವರಣದಲ್ಲಿ ಅನಾವರಣ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರುಣಾನಿಧಿ ಪ್ರತಿಮೆ ಲೋಕಾರ್ಪಣೆ ಮಾಡಿದರು.
ಚೆನ್ನೈ, [ಡಿ.16] ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಸ್ಥಾಪಕ ಎಂ ಕರುಣಾನಿಧಿ ಅವರ ಪ್ರತಿಮೆಯನ್ನು ಇಂದು [ಭಾನುವಾರ] ಅನಾವರಣಗೊಂಡಿದೆ.
ಚೆನ್ನೈನ ಅರಿವಳಯಂನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಆವರಣದಲ್ಲಿ ಅನಾವರಣ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರುಣಾನಿಧಿ ಪ್ರತಿಮೆ ಲೋಕಾರ್ಪಣೆ ಮಾಡಿದರು.
ಕಳೆದ ಆಗಸ್ಟ್ನಲ್ಲಿ 94 ವರ್ಷದ ಕರುಣಾನಿಧಿ ಇಹಲೋಕ ತ್ಯಜಿಸಿದ್ದರು. ಪ್ರತಿಮೆ ಲೋಕಾರ್ಪಣೆ ಸಂದರ್ಭದಲ್ಲಿ ಕರುಣಾನಿಧಿ ಅವರ ಪುತ್ರ, ಪಕ್ಷದ ಹಾಲಿ ಅಧ್ಯಕ್ಷ ಸ್ಟಾಲಿನ್ ಸೇರಿದಂತೆ ಅನೇಕ ರಾಜಕೀಯ ನಾಯಕರು, ಮತ್ತು ಚಿತ್ರ ತಾರೆಯರು ಉಪಸ್ಥಿತರಿದ್ದರು.
Chennai: UPA chairperson Sonia Gandhi unveils former Tamil Nadu Chief Minister M Karunanidhi's statue, at DMK headquarters pic.twitter.com/hM34stQqof
— ANI (@ANI)ಮುಖ್ಯವಾಗಿ ಮಹಾಘಟಬಂಧನ್ ನ ಬಹುತೇಕ ಎಲ್ಲ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರೋಧಿ ಬಣಗಳನ್ನು ಒಗ್ಗೂಡಿಸಿ ಮಹಾಘಟಬಂಧನ್ ನಿರ್ಮಿಸಿರುವ ಕಾಂಗ್ರೆಸ್ ಗೆ ಡಿಎಂಕೆ ಕೂಡಾ ಬೆಂಬಲ ವ್ಯಕ್ತಪಡಿಸಿದೆ.