ಕರುಣಾನಿಧಿ ಪ್ರತಿಮೆ ಲೋಕಾರ್ಪಣೆಗೊಳಿಸಿದ ಸೋನಿಯಾ ಗಾಂಧಿ

Published : Dec 16, 2018, 06:32 PM ISTUpdated : Dec 16, 2018, 06:39 PM IST
ಕರುಣಾನಿಧಿ ಪ್ರತಿಮೆ ಲೋಕಾರ್ಪಣೆಗೊಳಿಸಿದ ಸೋನಿಯಾ ಗಾಂಧಿ

ಸಾರಾಂಶ

ಚೆನ್ನೈನ ಅರಿವಳಯಂನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಆವರಣದಲ್ಲಿ ಅನಾವರಣ  ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಕರುಣಾನಿಧಿ ಪ್ರತಿಮೆ ಲೋಕಾರ್ಪಣೆ ಮಾಡಿದರು. 

ಚೆನ್ನೈ, [ಡಿ.16] ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಸ್ಥಾಪಕ ಎಂ ಕರುಣಾನಿಧಿ ಅವರ ಪ್ರತಿಮೆಯನ್ನು ಇಂದು [ಭಾನುವಾರ] ಅನಾವರಣಗೊಂಡಿದೆ.

ಚೆನ್ನೈನ ಅರಿವಳಯಂನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಆವರಣದಲ್ಲಿ ಅನಾವರಣ  ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಕರುಣಾನಿಧಿ  ಪ್ರತಿಮೆ ಲೋಕಾರ್ಪಣೆ ಮಾಡಿದರು. 

ಕಳೆದ ಆಗಸ್ಟ್​ನಲ್ಲಿ 94 ವರ್ಷದ ಕರುಣಾನಿಧಿ ಇಹಲೋಕ ತ್ಯಜಿಸಿದ್ದರು. ಪ್ರತಿಮೆ ಲೋಕಾರ್ಪಣೆ  ಸಂದರ್ಭದಲ್ಲಿ ಕರುಣಾನಿಧಿ ಅವರ ಪುತ್ರ, ಪಕ್ಷದ ಹಾಲಿ ಅಧ್ಯಕ್ಷ ಸ್ಟಾಲಿನ್​ ಸೇರಿದಂತೆ ಅನೇಕ ರಾಜಕೀಯ ನಾಯಕರು, ಮತ್ತು ಚಿತ್ರ ತಾರೆಯರು ಉಪಸ್ಥಿತರಿದ್ದರು.

ಮುಖ್ಯವಾಗಿ ಮಹಾಘಟಬಂಧನ್​ ನ ಬಹುತೇಕ ಎಲ್ಲ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರೋಧಿ ಬಣಗಳನ್ನು ಒಗ್ಗೂಡಿಸಿ ಮಹಾಘಟಬಂಧನ್ ನಿರ್ಮಿಸಿರುವ ಕಾಂಗ್ರೆಸ್ ಗೆ ಡಿಎಂಕೆ ಕೂಡಾ ಬೆಂಬಲ ವ್ಯಕ್ತಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು