ಎನ್‌ಡಿಎ ಮೈತ್ರಿಕೂಟದಲ್ಲಿ ಮತ್ತೆ ಬಿರುಕು

Published : Nov 12, 2018, 12:13 PM IST
ಎನ್‌ಡಿಎ ಮೈತ್ರಿಕೂಟದಲ್ಲಿ ಮತ್ತೆ ಬಿರುಕು

ಸಾರಾಂಶ

ಮತ್ತೆ ಇದೀಗ ಎನ್ ಡಿಎ ಮೈತ್ರಿ ಕೂಟದಲ್ಲಿ ಬಿರುಕೊಂಡು ಕಾಣಿಸಿಕೊಂಡಿದೆ. ತಮ್ಮ ಪಕ್ಷದ ಶಾಸಕರೊಬ್ಬರನ್ನು ಜೆಡಿಯುಗೆ ಸೆಳೆಯಲು ನಿತೀಶ್ ಕುಮಾರ್ ಯತ್ನಿಸಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ರಾಷ್ಟ್ರೀಯ ಲೋಕ ಸಮತಾ ಪಕ್ಷದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಆರೋಪಿಸಿದ್ದಾರೆ. 

ಪಟನಾ: ಬಿಹಾರ ಎನ್‌ಡಿಎಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ತಮ್ಮ ಪಕ್ಷದ ಶಾಸಕರೊಬ್ಬರನ್ನು ಜೆಡಿಯುಗೆ ಸೆಳೆಯಲು ನಿತೀಶ್ ಕುಮಾರ್ ಯತ್ನಿಸಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ರಾಷ್ಟ್ರೀಯ ಲೋಕ ಸಮತಾ ಪಕ್ಷದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಆರೋಪಿಸಿದ್ದಾರೆ. 

ಈ ಸಂಬಂಧ ಹಾಗೂ ಸೀಟು ಹಂಚಿಕೆ ಬಗ್ಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಲು ನಿರ್ಧರಿಸಿರುವುದಾಗಿಯೂ ಹೇಳಿದ್ದಾರೆ.

ಆರ್‌ಎಲ್‌ಎಸ್‌ಪಿ ಶಾಸಕ ಸುಧಾಂಶು ಶೇಖರ್ ಇತ್ತೀಚೆಗೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿದ್ದು, ಜೆಡಿಯು ಸೇರುವ ಸಾಧ್ಯತೆ ಇದೆ  ಎಂದು ಹೇಳಲಾಗುತ್ತಿದೆ. ನಿತೀಶ್ ಪಕ್ಷಗಳನ್ನು ಒಡೆಯುವ ಕಾರ್ಯದಲ್ಲಿ ನಿಪುಣರಾಗಿದ್ದು, ತಮ್ಮ ಹೋರಾಟ ಮುಂದುವರಿಸುವುದಾಗಿ ಕುಶ್ವಾಹಾ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು