
ನವದೆಹಲಿ (ಫೆ.09): ಉಪಹಾರ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ 2015 ರಲ್ಲಿ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಿದ ಸುಪ್ರೀಂಕೋರ್ಟ್ ಪ್ರಮುಖ ಆರೋಪಿ ಗೋಪಾಲ್ ಅನ್ಸಾಲ್ ಗೆ ಒಂದು ವರ್ಷ ಜೈಲುಶಿಕ್ಷೆಯನ್ನು ವಿಧಿಸಿದೆ.
ನಾಲ್ಕು ವಾರದೊಳಗೆ ಶರಣಾಗುವಂತೆ ಅನ್ಸಾಲ್ ಗೆ ನ್ಯಾಯಾಲಯ ಹೇಳಿದೆ.
1997 ರಲ್ಲಿ ಗ್ರೀನ್ ಪಾರ್ಕ್ ಸಮೀಪದ ಉಪಹಾರ್ ಚಿತ್ರ ಮಂದಿರದಲ್ಲಿ 'ಬಾರ್ಡರ್' ಚಿತ್ರ ಪ್ರದರ್ಶನದ ವೇಳೆ ಅಗ್ನಿ ದುರಂತ ಸಂಭವಿಸಿ 59 ಮಂದಿ ಮೃತಪಟ್ಟಿದ್ದರು. ಸುಮಾರು 150 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಗೋಪಾಲ್ ಅನ್ಸಾಲ್ ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೆ ಇವರ ಸಹೋದರ ಸುಶೀಲಸ್ ಅನ್ಸಾಲ್ ಗೆ ವಯಸ್ಸಿನ ಆಧಾರದ ಮೇಲೆ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.