ರಾತ್ರೋರಾತ್ರಿ JDS ಮುಖಂಡನ ಬಂಧನ, ಬಿಡುಗಡೆ, ಏನಿದು ಘಟನೆ..?

Published : Mar 10, 2019, 05:27 PM IST
ರಾತ್ರೋರಾತ್ರಿ JDS ಮುಖಂಡನ ಬಂಧನ, ಬಿಡುಗಡೆ, ಏನಿದು ಘಟನೆ..?

ಸಾರಾಂಶ

ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು ರಾತ್ರೋರಾತ್ರಿ ಜೆಡಿಎಸ್ ಮುಖಂಡನನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಏನಿದು ಘಟನೆ..?

ಬೆಂಗಳೂರು, [ಮಾ .10]: ವ್ಯಕ್ತಿವೋರ್ವನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ರಾತ್ರೋರಾತ್ರಿ ಜೆಡಿಎಸ್ ಮುಖಂಡ ಅಲ್ತಾಫ್ ಖಾನ್​ನನ್ನು ಬಂಧಿಸಿ ಜಾಮೀನ ಮೇಲೆ ಬಿಡುಗಡೆ ಮಾಡಲಾಗಿದೆ. 

ಜೆಡಿಎಸ್​ ಮುಖಂಡ ಅಲ್ತಾಫ್​ ಖಾನ್​ ಬಿಡುಗಡೆ ಆಗಿರುವವರು. ಅಲ್ತಾಫ್​ ಹೋಟೆಲ್​ಗೆ ನುಗ್ಗಿ ವ್ಯಕ್ತಿವೋರ್ವನಿಗೆ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಈ ಹಿನ್ನೆಲೆ ಉಪ್ಪಾರಪೇಟೆ ಪೊಲೀಸರು ಶನಿವಾರ ತಡರಾತ್ರಿ ಅಲ್ತಾಫ್ ಖಾನ್ ಬಂಧಿಸಿ, ತಡರಾತ್ರಿವರೆಗೆ ವಿಚಾರಣೆ ನಡೆಸಿ ಬಳಿಕ ನ್ಯಾಯಾಧಿಶರ ನಿವಾಸಕ್ಕೆ ಹಾಜರು ಪಡಿಸಿದದ್ದರು.

ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲೇ ಜಾಮೀನು ಪಡೆದು ಅಲ್ತಾಫ್ ಖಾನ್ ರಿಲೀಸ್ ಆಗಿದ್ದಾನೆ.‌  ಅಲ್ತಾಫ್ ಖಾನ್ ಬಂಧನದ ಹಿಂದೆ ಮೈತ್ರಿ ಸರ್ಕಾರದ ಪ್ರಭಾವಿ ಸಚಿವರೊಬ್ಬರ  ಕೈವಾಡವಿದೆ ಎನ್ನುವುದನ್ನು ಅಲ್ತಾಪ್ ಖಾನ್ ಬೆಂಬಲಗರು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಧಾರ್‌ ಲಿಂಕ್‌ ಕಮಾಲ್‌, ಒಂದೇ ವರ್ಷದಲ್ಲಿ 3 ಕೋಟಿ ಫೇಕ್‌ IRCTC ಅಕೌಂಟ್‌ ಬಂದ್‌ ಮಾಡಿದ ಭಾರತೀಯ ರೈಲ್ವೇ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ