
ಹೈದರಾಬಾದ್: ಮೂರೂವರೆ ದಶಕಗಳಿಂದ ವಿರೋಧಿಸಿಕೊಂಡು ಬಂದಿದ್ದ ತೆಲುಗುದೇಶಂ ಪಕ್ಷ (ಟಿಡಿಪಿ)ದ ಜತೆ ತೆಲಂಗಾಣದಲ್ಲಿ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ಸಿನ ನಿರ್ಧಾರ ಆಂಧ್ರಪ್ರದೇಶ ಘಟಕದಲ್ಲಿ ತಳಮಳಕ್ಕೆ ಕಾರಣವಾಗಿದೆ. ಕಾಂಗ್ರೆಸ್ಸಿನ ಈ ನಡೆ ಖಂಡಿಸಿ ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಚಿರಂಜೀವಿ ಅವರು ಪಕ್ಷ ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತೆಲಂಗಾಣ ರೀತಿ ಆಂಧ್ರದಲ್ಲೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಬಹುದು ಎಂಬ ಅನುಮಾನದಿಂದ ಈಗಾಗಲೇ ನ.1ರಂದು ಇಬ್ಬರು ನಾಯಕರು ಕಾಂಗ್ರೆಸ್ಸಿಗೆ ವಿದಾಯ ಹೇಳಿದ್ದಾರೆ. ಇದೀಗ ಚಿರಂಜೀವಿ ಕೂಡ ಅದೇ ಹಾದಿಯಲ್ಲಿದ್ದಾರೆ. ಟಿಡಿಪಿ- ಕಾಂಗ್ರೆಸ್ಸಿನ ಮೈತ್ರಿ ಅನೈತಿಕವಾಗಿದೆ ಎಂಬ ಭಾವನೆ ಹೊಂದಿರುವ ಚಿರಂಜೀವಿ ಬೇಸರಗೊಂಡಿದ್ದಾರೆ. ರಾಜೀನಾಮೆ ಸಲ್ಲಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕುಟುಂಬದ ಮೂಲವೊಂದು ತಿಳಿಸಿದೆ.
ಮಾಜಿ ಸಚಿವ ವಟ್ಟಿವಸಂತ ಕುಮಾರ್ ಹಾಗೂ ಹಿರಿಯ ನಾಯಕ ಸಿ. ರಾಮಚಂದ್ರಯ್ಯ ಅವರು ಪಕ್ಷದ ನಿರ್ಧಾರ ವಿರೋಧಿಸಿ ನ.1ರಂದು ಕಾಂಗ್ರೆಸ್ ತೊರೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ