
ಬೆಳಗಾವಿ: ರಂಜಾನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಉರ್ದು ಶಾಲೆಗಳ ಮಕ್ಕಳಿಗೆ ಸರ್ಕಾರದ ವತಿಯಿಂದ ತಿಂಗಳ ಕಾಲ ಮಧ್ಯಾಹ್ನದ ಬಿಸಿಯೂ ಟದ ಬದಲು ಬಾಳೆಹಣ್ಣು, ಖರ್ಜೂರ ನೀಡಲಾಗುತ್ತಿದೆ.
ರಂಜಾನ್ ತಿಂಗಳಲ್ಲಿ ಉರ್ದು ಶಾಲೆಗಳ ಬಹುತೇಕ ಮಕ್ಕಳು ಉಪವಾಸ ಮಾಡುವುದರಿಂದ ಮಧ್ಯಾಹ್ನದ ಬಿಸಿಯೂಟ ಉಳಿಯುತ್ತದೆ. ಸಂಪೂ ರ್ಣವಾಗಿ ಈ ಆಹಾರ ವ್ಯರ್ಥವಾಗಿ ಪೋಲಾಗುತ್ತದೆ. ಆದ್ದರಿಂದ ಪರ್ಯಾಯವಾಗಿ ಬಾಳೆಹಣ್ಣು, ಖರ್ಜೂರ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ.
ಮಕ್ಕಳಿಗೆ ಮಧ್ಯಾಹ್ನವೇ ಬಾಳೆಹಣ್ಣು, ಖರ್ಜೂರ ವಿತರಿಸಲಾಗುತ್ತಿದ್ದು, ಮಕ್ಕಳು ಅದನ್ನು ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಸಂಜೆ ಉಪವಾಸ ಮುಗಿದ ಬಳಿಕ ಇಫ್ತಿಯಾರ್ನಲ್ಲಿ ಇದನ್ನು ಸೇವಿಸುವ ಮೂಲಕ ಉಪವಾಸವನ್ನು ಬಿಡುತ್ತಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.