ಅನುರಾಗ್ ತಿವಾರಿ ಸಾವು: ತನಿಖಾಧಿಕಾರಿಗಳನ್ನು ಬದಲಿಸುವಂತೆ ಒತ್ತಾಯ

Published : Sep 25, 2017, 10:25 PM ISTUpdated : Apr 11, 2018, 12:50 PM IST
ಅನುರಾಗ್ ತಿವಾರಿ ಸಾವು: ತನಿಖಾಧಿಕಾರಿಗಳನ್ನು ಬದಲಿಸುವಂತೆ ಒತ್ತಾಯ

ಸಾರಾಂಶ

ಐಎಎಸ್​ ಅಧಿಕಾರಿ ಅನುರಾಗ್​ ತಿವಾರಿ ಸಾವಿನ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಿಸುವಂತೆ ನಿವೃತ್ತ ಐಎಎಸ್​ ಅಧಿಕಾರಿ ವಿಜಯ್​ ಕುಮಾರ್​ ಒತ್ತಾಯಿಸಿದ್ದಾರೆ.  

ಬೆಂಗಳೂರು (ಸೆ.25): ಐಎಎಸ್​ ಅಧಿಕಾರಿ ಅನುರಾಗ್​ ತಿವಾರಿ ಸಾವಿನ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಿಸುವಂತೆ ನಿವೃತ್ತ ಐಎಎಸ್​ ಅಧಿಕಾರಿ ವಿಜಯ್​ ಕುಮಾರ್​ ಒತ್ತಾಯಿಸಿದ್ದಾರೆ.  

ಕೇಂದ್ರ ಕ್ಯಾಬಿನೆಟ್​ಕಾರ್ಯದರ್ಶಿಗೆ ಪತ್ರ ಬರೆದಿರುವ ವಿಜಯ್​ ಕುಮಾರ್​, ಸಿಬಿಐ ಕಡೆಯಿಂದ ಸಾಕಷ್ಟು ತಪ್ಪುಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅನುರಾಗ್​​ ತಿವಾರಿ ಸಾವನ್ನಪ್ಪಿದ ದಿನ ಅವರ ಜೊತೆಗಿದ್ದ ಐಎಎಸ್​ ಅಧಿಕಾರಿ ಹಾಗೂ ಆಹಾರ ಇಲಾಖೆ ಹಿರಿಯ ಅಧಿಕಾರಿಗಳನ್ನು ಬಂಧಿಸುವಂತೆ ಅವರ ಕುಟುಂಬಸ್ಥರು ಒತ್ತಾಯಿಸಿದ್ದಾರೆ.  ಅನುರಾಗ್​ ಡ್ರಗ್​ ಓವರ್​ ಡೋಸ್​ನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ನಂಬಿಸುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಐಪಿಎಸ್​ ದರ್ಜೆಯ ಅಧಿಕಾರಿಗಳನ್ನು ತನಿಖಾಧಿಕಾರಿಗಳಾಗಿ ನೇಮಿಸುವಂತೆ ವಿಜಯ್​ ಕುಮಾರ್​ ಒತ್ತಾಯಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?