ಆರ್‌ಬಿಐ: ನೆಹರು ಮಾಡಿದ್ದನ್ನೇ ಮಾಡಿದ ಮೋದಿ ಮೇಲೇಕೆ ಕಣ್ಣು?

Published : Dec 11, 2018, 03:54 PM ISTUpdated : Dec 11, 2018, 04:05 PM IST
ಆರ್‌ಬಿಐ: ನೆಹರು ಮಾಡಿದ್ದನ್ನೇ ಮಾಡಿದ ಮೋದಿ ಮೇಲೇಕೆ ಕಣ್ಣು?

ಸಾರಾಂಶ

ಆರ್‌ಬಿಐ ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜಿನಾಮೆ | ಆರ್‌ಬಿಐ ವಿಚಾರದಲ್ಲಿ ಮೋದಿ ಮೂಗುತೂರಿಸುವಿಕೆ ಜಾಸ್ತಿ ಆಯ್ತಾ? 

ನವದೆಹಲಿ (ಡಿ.11):  ಸ್ವತಃ ಪ್ರಧಾನಿ ನರೇಂದ್ರ ಮೋದಿ ಆರಿಸಿ ತಂದ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಚುನಾವಣಾ ಫಲಿತಾಂಶಗಳು ಬರುವ ಮುನ್ನಾ ದಿನ ರಾಜೀನಾಮೆ ನೀಡಿರುವುದು ಮೋದಿ ಅವರಿಗೆ ಒಂದು ದೊಡ್ಡ ಹಿನ್ನಡೆ. 

ಹೋಗ್ಬನ್ನಿ ಒಳ್ಳೆದಾಗ್ಲಿ: ಮೋದಿ ಬಿಚ್ಚಿಟ್ಟ ಊರ್ಜಿತ್ ರಹಸ್ಯ!

ಹಾಗೆ ನೋಡಿದರೆ 15 ದಿನಗಳ ಹಿಂದೆಯೇ ಊರ್ಜಿತ್ ಪಟೇಲ್ ಪ್ರಧಾನಿಯನ್ನು ಭೇಟಿ ಆದಾಗ ರಾಜೀನಾಮೆಯ ಸಂಕೇತ ನೀಡಿದ್ದರು. ಆದರೆ ಒಂದು ಕಡೆ ತಾನೇ ನೇಮಿಸಿದ ಸಲಹೆಗಾರ ನೋಟು ರದ್ದತಿ ಬಗ್ಗೆ ಕಿಡಿ ಕಾರಿರುವಾಗ, ಎಕ್ಸಿಟ್ ಪೋಲ್‌ಗಳು ಬಿಜೆಪಿಗೆ ಖುಷಿಯಾಗುವ ಮಾತನ್ನಂತೂ ಹೇಳದಿರುವಾಗ ಖಂಡಿತವಾಗಿಯೂ ಗವರ್ನರ್ ರಾಜೀನಾಮೆ ಒಳ್ಳೆಯ ಸುದ್ದಿ ಏನಲ್ಲ. ಹಾಗೆ ನೋಡಿದರೆ ಬ್ರಿಟಿಷ್ ಕಾಲದಿಂದಲೂ ಆರ್‌ಬಿಐ ಕೇವಲ ಸಲಹೆ ನೀಡಬಹುದೋ ಅಥವಾ ಸ್ವಾಯತ್ತ ಸಂಸ್ಥೆಯೋ ಎನ್ನುವ ಬಗ್ಗೆ ಜಗಳಗಳು ನಡೆದಿವೆ.

ಮೋದಿಯನ್ನು ನಡುನೀರಲ್ಲಿ ಬಿಟ್ಟ ಊರ್ಜಿತ್: ಆರ್‌ಬಿಐ ಸ್ಥಾನಕ್ಕೆ ರಾಜೀನಾಮೆ!

ನೆಹರು ಕ್ಯಾಬಿನೆಟ್ ನಲ್ಲಿ ಹಣಕಾಸು ಸಚಿವರಾಗಿದ್ದ ಟಿ ಟಿ ಕೃಷ್ಣಮಾಚಾರಿ ಮತ್ತು ಆಗಿನ ಆರ್‌ಬಿಐ ಗವರ್ನರ್ ರಾಮ್ ರಾವ್ ನಡುವೆ ಜಗಳ ಹತ್ತಿಕೊಂಡಾಗ ಪಂಡಿತ್ ನೆಹರು, ಆರ್‌ಬಿಐ ಸರ್ಕಾರದ ಅಧೀನ ಎಂದು ಹೇಳಿದ್ದರು. ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಆರ್‌ಬಿಐ ಹಣಕಾಸು ಇಲಾಖೆಗೆ ಸಲಹೆ ಕೊಡಬಹುದು, ನಿಯಂತ್ರಣದ ಅಧಿಕಾರ ಇಲ್ಲ ಎಂದಿದ್ದರು. ಆದರೆ ಈಗ ಮೋದಿ ಕಾಲದಲ್ಲಿ ಮತ್ತೆ ಇದೇ ಪ್ರಶ್ನೆ ಉದ್ಭವವಾಗಿ ರಾಜೀನಾಮೆವರೆಗೆ ವಿಪರೀತಕ್ಕೆ ಹೋಗಿದೆ. 

-ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ರಾಜಕಾರಣದ ಸುದ್ದಿಗಾಗಿ  ಇಂಡಿಯಾ ಗೇಟ್  ಕ್ಲಿಕ್ ಮಾಡಿ  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ