
ಬೆಂಗಳೂರು (ಡಿ. 15): ಊರ್ಜಿತ್ ಪಟೇಲ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಆರ್ಬಿಐ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ.
ಆದರೆ, ಕೇಂದ್ರ ಹಣಕಾಸು ವ್ಯವಹಾರಗಳ ಮಾಜಿ ಕಾರ್ಯದರ್ಶಿಯಾದ ದಾಸ್ ನೇಮಕದ ಸಂಬಂಧ ಹಾಗೂ ಊರ್ಜಿತ್ ಪಟೇಲ್ ಅವರ ರಾಜೀನಾಮೆಯನ್ನು ಒಮ್ಮೆಲೇ ಸಮ್ಮತಿಸಿದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಭಾರೀ ಅಸಮಾಧಾನ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಮೌನ ಮುರಿದಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ, ಊರ್ಜಿತ್ ಪಟೇಲ್ ಅವರು ಆರ್ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದು.
ಆದರೆ, ‘ಆರ್ಬಿಐನ ವಾಟ್ಸಪ್ ಗ್ರೂಪ್ಗೆ ಪಟೇಲ್ ಅವರೇ ಅಡ್ಮಿನ್ ಆಗಿದ್ದು, ಅಲ್ಲಿಂದಲೇ ಅವರು ಆರ್ಬಿಐ ಗವರ್ನರ್ ನಿರ್ವಹಿಸಬೇಕಾದ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ’ ಎಂದು ಜೇಟ್ಲಿ ವಿಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.