ಸಾಮಾಜಿಕ ಜಾಲತಾಣಗಳಲ್ಲಿ ಧಮ್ಕಿ: ಗಾಯಕಿ ಸುಹಾನ್ ಪರ ನಿಂತ ಆಹಾರ ಸಚಿವ ಯು.ಟಿ.ಖಾದರ್

Published : Mar 07, 2017, 08:52 PM ISTUpdated : Apr 11, 2018, 01:05 PM IST
ಸಾಮಾಜಿಕ ಜಾಲತಾಣಗಳಲ್ಲಿ ಧಮ್ಕಿ: ಗಾಯಕಿ ಸುಹಾನ್ ಪರ ನಿಂತ ಆಹಾರ ಸಚಿವ ಯು.ಟಿ.ಖಾದರ್

ಸಾರಾಂಶ

ಖಾಸಗಿ ವಾಹಿನಿಯೊಂದರಲ್ಲಿ ಮುಸ್ಲಿಂ ಯುವತಿ ಹಿಂದೂ ದೇವರನಾಮ ಹಾಡಿದ್ದು ತಪ್ಪಲ್ಲ ಎಂದು ಆಹಾರ ಸಚಿವ ಯು.ಟಿ.ಖಾದರ್​ ಹೇಳಿದ್ದಾರೆ. ಯುವತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಧಮ್ಕಿ ಹಾಕಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಬೆಂಗಳೂರು(ಮಾ.08): ಖಾಸಗಿ ವಾಹಿನಿಯೊಂದರಲ್ಲಿ ಮುಸ್ಲಿಂ ಯುವತಿ ಹಿಂದೂ ದೇವರನಾಮ ಹಾಡಿದ್ದು ತಪ್ಪಲ್ಲ ಎಂದು ಆಹಾರ ಸಚಿವ ಯು.ಟಿ.ಖಾದರ್​ ಹೇಳಿದ್ದಾರೆ. ಯುವತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಧಮ್ಕಿ ಹಾಕಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಚಾಮರಾಜನಗರದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ವಿಶ್ವ ಮಹಿಳಾ ದಿನ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಖಾದರ್, ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಧಮ್ಕಿ ಹಾಕಲು ಇವರು ಯಾರು? ಒಂದು ವೇಳೆ ಏನಾದರೂ ತಪ್ಪಾಗಿದ್ದರೆ ಅದಕ್ಕೆ ಧಾರ್ಮಿಕ ಮುಖಂಡರು, ಸಮಾಜದ ಹಿರಿಯರು ಇದ್ದಾರೆ ಅವರು ನೋಡಿಕೊಳ್ಳುತ್ತಾರೆ ಎಂದು ಸಚಿವ ಯ.ಟಿ.ಖಾದರ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಅಶಾಂತಿ ಉಂಟು ಮಾಡುವವರ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!