
ಮಂಗಳೂರು(ಡಿ.3): ಮಂಗಳೂರಿನ ಕಡಲ ತಡಿಗೂ ಕೂಡ ಓಖಿ ಚಂಡ ಮಾರುತದ ಅಬ್ಬರ ತಟ್ಟಿದ್ದು, ಈ ನಿಟ್ಟಿನಲ್ಲಿ ಸಚಿವ ಯು.ಟಿ ಖಾದರ್ ಅವರು ತಮ್ಮ ಪ್ರವಾಸವನ್ನು ರದ್ದು ಮಾಡಿದ್ದಾರೆ.
ಇಂದು ವಿದೇಶದಿಂದ ವಾಪಸಾಗುತ್ತಿದ್ದ ಅವರು ಮಂಗಳೂರಿನಲ್ಲಿ 2 ದಿನಗಳ ಕಾಲ ಪ್ರವಾಸ ಕೈಗೊಳ್ಳಲು ತೀರ್ಮಾನ ಮಾಡಿದ್ದರು. ಆದರೆ ಕಡಲತಡಿಯಲ್ಲಿ ಚಂಡಮಾರುತದ ಅಬ್ಬರ ಇರುವ ನಿಟ್ಟಿನಲ್ಲಿ ಪ್ರವಾಸ ರದ್ದು ಮಾಡಿದ್ದಾರೆ. ಉಳ್ಳಾಲದಲ್ಲಿ ಓಖಿ ಚಂಡಮಾರುತ ಜೋರಾಗಿದ್ದು, ಸೋಮೇಶ್ವರದ ಬಳಿಯೂ ಕೂಡ ಅಲೆಗಳು ರಭಸದಿಂದ ಬೀಸತೊಡಗಿವೆ. ಇದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಹಸಿಲ್ದಾರ್'ಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.