
ವಿಕಾಸಸೌಧ(ಫೆ.27): ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಭಾರತಕ್ಕೆ ಬಂದಾಗ ನಮ್ಮ ಪ್ರಧಾನಿ ಚಹ ಮಾಡಿಕೊಟ್ಟರೂ ತುಟಿ ಬಿಚ್ಚದ ಇವರು ಪಕ್ಕದ ರಾಜ್ಯದ ಮುಖ್ಯಮಂತ್ರಿ ನಮ್ಮ ಜಿಲ್ಲೆಗೆ ಬಂದಾಗ ಬೊಬ್ಬೆಯಿಡುವುದೇಕೆ ಎಂದು ಆಹಾರ ಸಚಿವ ಯು.ಟಿ ಖಾದರ್ ಪ್ರಶ್ನಿಸಿದ್ದಾರೆ.
ಮಂಗಳೂರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿಗೆ ವಿರೋಧ ವ್ಯಕ್ತಪಡಿಸಿದ ಹಿಂದುಪರ ಸಂಘಟನೆಗಳ ಮೇಲೆ ಹರಿಹಾಯ್ದ ಖಾದರ್, ಪಾಕ್ ಪ್ರಧಾನಿ ಬಂದಾಗ ವಿರೋಧ ವ್ಯಕ್ತಪಡಿಸದವರು ಕೇರಳ ಮುಖ್ಯಮಂತ್ರಿ ಬಂದಾಗ ವಿರೋಧ ವ್ಯಕ್ತಪಡಿಸಿದ್ದಾರೆ. ಪಿಣರಾಯಿ ಮಂಗಳೂರು ಭೇಟಿ ವಿರೋಧಿಸಿ ಬಂದ್ ಆಚರಿಸಿದ್ದು ಸರಿಯಲ್ಲ ಎಂದು ಆಹಾರ ಸಚಿವ ಖಾದರ್ ಅಭಿಪ್ರಾಯಪಟ್ಟಿದ್ದಾರೆ.
ಪಿಣರಾಯಿ ವಿಜಯನ್ ವಿರೋಧಿಗಳಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಂವಿಧಾನ ವಿರೋಧಿಗಳನ್ನು ಕುರಿತಾಗಿ ಆ ಮಾತನ್ನಾಡಿದ್ದೇನೆ. ಬಸ್'ಗೆ ಕಲ್ಲು ತೂರಿದ್ದು, ಫ್ಲೆಕ್ಸ್'ಗೆ ಬೆಂಕಿಯಿಟ್ಟ ಸಂಘಟನೆಗಳ ನಡೆ ಸರಿಯಲ್ಲ ಎಂದು ಖಾದರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.