
ನವದೆಹಲಿ[ಡಿ.21]: ಹನುಮಂತನಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದಲಿತ ಪಟ್ಟಕಟ್ಟಿದರು ಎನ್ನಲಾದ ವರದಿಗಳು ಇತ್ತೀಚೆಗೆ ವಿವಾದ ಸೃಷ್ಟಿಸಿದ್ದವು. ಇದರ ಬೆನ್ನಲ್ಲೇ ಈಗ ಬಿಜೆಪಿಯ ಮುಸ್ಲಿಂ ಸಂಸದರೊಬ್ಬರು ‘ಹನುಮಂತ ಮುಸಲ್ಮಾನ’ ಎಂಬ ಹೇಳಿಕೆ ನೀಡಿ ನಗೆಪಾಟಲಿಗೆ ಈಡಾಗಿದ್ದಾರೆ.
ಇವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸುದ್ದಿಸಂಸ್ಥೆಯೊಂದರ ಜತೆ ಗುರುವಾರ ಮಾತನಾಡಿದ ಉತ್ತರಪ್ರದೇಶ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಬುಕ್ಕಲ್ ನವಾಬ್, ‘ಹನುಮಾನ್ ಮುಸಲ್ಮಾನ ಎಂದು ನಾವು ನಂಬುತ್ತೇವೆ. ಅದಕ್ಕೆಂದೇ ಆತನ ಹೆಸರನ್ನೇ ಹೋಲುವಂತೆ ಮುಸ್ಲಿಮರಲ್ಲಿ ರೆಹಮಾನ್, ರಮಜಾನ್, ಫರ್ಮಾನ್, ಝೀಶಾನ್, ಕುರ್ಬಾನ್ ಎಂಬ ಹೆಸರುಗಳು ಸೃಷ್ಟಿಯಾಗಿವೆ. ಇಂತಹ ಎಲ್ಲ ಹೆಸರುಗಳು ಹನುಮಾನ್ನನ್ನೇ ಹೋಲುವಂತಿವೆ. ಇಸ್ಲಾಂನಲ್ಲಿ ಮಾತ್ರ ಇಂತಹ ಹೆಸರುಗಳಿವೆ’ ಎಂದರು. ‘ಹನುಮಂತ ಇರದೇ ಹೋಗಿದ್ದರೆ ಈ ಮುಸ್ಲಿಮರಲ್ಲಿ ಈ ಹೆಸರುಗಳು ಸೃಷ್ಟಿಯಾಗುತ್ತಿರಲಿಲ್ಲ’ ಎಂದೂ ಅವರು ಹೇಳಿದರು.
ಸದ್ಯ ಈ ಬಿಜೆಪಿ ನಾಯಕ ತಮ್ಮ ಹೇಳಿಕೆಯಿಂದ ನಗೆಪಾಟಲಿಗೀಡಾಗಿದ್ದರೂ, ಇವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ