
ಲಕ್ನೋ[ಸೆ.9] ಉತ್ತರ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಇದರಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭಾರೀ ಮಳೆ ಸುರಿಯುತ್ತಿರುವುದರಿಂದ ಈಗಾಗಲೇ 30ಕ್ಕೂ ಅಧಿಕ ಸಾವು ಸಂಭವಿಸಿದ್ದು ಗಂಗಾ, ರಾಮಗಂಗಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.
ಇನ್ನು ನದಿ ತಟದ ಪ್ರದೇಶಗಳಲ್ಲಿ ವಾಸ ಮಾಡುವ ಅನೇಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ ಗಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನು 27 ಜಿಲ್ಲೆಗಳು ಪ್ರವಾಹದ ತತ್ತರಿಸಿದ್ದು ಇಲ್ಲಿರುವ 806 ಹಳ್ಳಿಗಳೂ ಸಮಸ್ಯೆ ಎದುರಿಸುತ್ತಿವೆ.
ಸೆಪ್ಟೆಂಬರ್ 11 ರಿಂದ 13ರವರೆಗೆ ಭಾರೀ ಪ್ರಮಾಣ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಂದೇಲಖಂಡ ಪ್ರದೇಶ ಪ್ರವಾಹ ಸ್ಥಿತಿಯನ್ನು ಎದುರಿಸುವ ಸಾಧ್ಯತೆ ಇದ್ದು ಸರಕಾರ ಸಕಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.