
ಲಕ್ನೋ : ಉತ್ತರ ಪ್ರದೇಶದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮತ್ತೆ ಆ್ಯಂಟಿ ರೋಮಿಯೋ ಸ್ಕ್ಯಾಡ್ ಕಾರ್ಯಪೃವೃತ್ತರಾಗಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.
ಸಮಾಜ ಘಾತುಕ ಚಟುವಟಿಕೆಗಳಲ್ಲಿ ತೊಡಗಿದವರು ಹಾಗೂ ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಗೃಹ ಇಲಾಖೆಯೊಂದಿಗೆ ಉನ್ನತ ಮಟ್ಟದ ಸಭೆ ಕರೆಯುವ ಮೂಲಕ ಮಹಿಳಾ ಸುರಕ್ಷೆಯ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗೂ ಮಹಿಳಾ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.
ಆ್ಯಂಟಿ ರೋಮಿಯೋ ಸ್ಕ್ಯಾಡ್ ತಕ್ಷಣ ಸೂಕ್ಷ್ಮ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಶೈಕ್ಷಣಿಕ ವರ್ಷಾರಂಭವಾದ ಈ ಸಂದರ್ಣದಲ್ಲಿ ಶಾಲೆಗಳಲ್ಲಿ ಮಹಿಳಾ ಸುರಕ್ಷೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಿಎಂ ಆದೇಶ ನೀಡಿದರು.
2017 ರಲ್ಲಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಮಹಿಳಾ ಸುರಕ್ಷತೆ ದೃಷ್ಟಿಯಿಂದ ಯೋಗಿ ಆದಿತ್ಯನಾಥ್ ಆ್ಯಂಟಿ ರೋಮಿಯೋ ಸ್ಕ್ಯಾಡ್ ರಚಿಸಿದ್ದರು. ಬಳಿಕ ನೈತಿಕ ಪೊಲೀಸ್ ಗಿರಿ ಆರೋಪದಲ್ಲಿ ಕೆಲಸ ನಿಲ್ಲಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.