ಕಾರು ರಕ್ತವಾಗುತ್ತೆಂದು ಅಪಕ್ಕಾತಕ್ಕೀಡಾದವರನ್ನು ಆಸ್ಪತ್ರೆಗೆ ಸೇರಿಸದ ಪೊಲೀಸರು!

Published : Jan 20, 2018, 11:41 AM ISTUpdated : Apr 11, 2018, 01:02 PM IST
ಕಾರು ರಕ್ತವಾಗುತ್ತೆಂದು ಅಪಕ್ಕಾತಕ್ಕೀಡಾದವರನ್ನು ಆಸ್ಪತ್ರೆಗೆ ಸೇರಿಸದ ಪೊಲೀಸರು!

ಸಾರಾಂಶ

ಅಪಕ್ಕಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದವರನ್ನು 'ಕಾರು ರಕ್ತವಾಗುತ್ತದೆ' ಎಂದು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ನಿರಾಕರಿಸಿದ್ದರಿಂದ,  ಇಬ್ಬರು ಯುವಕರು ಅಸುನೀಗಿದ್ದಾರೆ.

ಶಹರ್‌ಪುರ್: ಅಪಕ್ಕಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ನಿರಾಕರಿಸಿದ್ದರಿಂದ,  ಇಬ್ಬರು ಯುವಕರು ಅಸುನೀಗಿದ್ದಾರೆ. ಪೊಲೀಸರ ಈ ಅಮಾನವೀಯ ವರ್ತನೆಗೆ ಅತೀವ ವಿರೋಧ ವ್ಯಕ್ತವಾಗಿದ್ದು, ಉತ್ತರ ಪ್ರದೇಶದ ಶಹರನ್‌ಪುರ ಪೊಲೀಸರು ಇವರನ್ನು ಅಮಾನತುಗೊಳಿಸಿದ್ದಾರೆ.

ರಕ್ತದ ಮಡುವಿನಲ್ಲಿದ್ದ ಯುವಕರನ್ನು ಗಸ್ತಿನಲ್ಲಿದ್ದ ಪೊಲೀಸರು ನೋಡಿದ್ದಾರೆ. ಆದರೆ, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೆ ಕಾರು ರಕ್ತವಾಗುತ್ತದೆ ಎಂಬ ನೆಪವೊಡ್ಡಿ, ಆಸ್ಪತ್ರೆಗೆ ಸಾಗಿಸಲು ನಿರಾಕರಿಸಿದ್ದ ವೀಡಿಯೋವನ್ನು ಖಾಸಗಿ ಇಂಗ್ಲಿಷ್ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡುತ್ತಿತ್ತು. 

 

 

ತನಿಖೆ ನಂತರ ಈ ಪೊಲೀಸರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಹರನ್‌ಪುನ್ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ. ಪೊಲೀಸರು ವೈದ್ಯಕೀಯ ನೆರವು ನೀಡುವುದನ್ನು ನಿರಾಕರಿಸಿದ ವೀಡಿಯೋ ವೈರಲ್ ಆಗಿದ್ದು, ಈ ಆರೋಪ ಸತ್ಯವೆನಿಸುತ್ತದೆ, ಎಂದವರು ಹೇಳಿದ್ದಾರೆ.

'ಯಾರದ್ದೋ ಮಕ್ಕಳಿವರು. ಇವರನ್ನು ಆಸ್ಪತ್ರೆಗೆ ಸೇರಿಸೋಣ..' ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ಮನವಿ ಮಾಡಿಕೊಳ್ಳುತ್ತಿದ್ದಾಗ, 'ಕಾರು ರಕ್ತವಾಗುತ್ತದೆ. ಅದನ್ನು ತೊಳೆದರೆ ರಾತ್ರಿಯೆಲ್ಲಾ ನಾವು ಕೂರೋದು ಎಲ್ಲಿ?'ಎಂದು ಪೊಲೀಸರು ಪ್ರಶ್ನಿಸಿದ ದೃಶ್ಯ ವೈರಲ್ ಆಗಿತ್ತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ