
ಲಕ್ನೋ (ಆ.18): ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿಲ್ಲವೆಂದು ಆಕ್ರೋಶಗೊಂಡ ಗ್ರಾಮಸ್ಥರು ಜಲ ಸತ್ಯಾಗ್ರಹ ಎನ್ನುವ ವಿನೂತನ ಪ್ರತಿಭಟನೆಯನ್ನು ಮಾಡಿದ್ದಾರೆ.
ಗಂಗಾನದಿಯಲ್ಲಿ ಕುತ್ತಿಗೆವರೆಗೆ ನೀರು ಬರುವಂತೆ ನಿಂತುಕೊಂಡು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಪ್ರತಿಭಟನಾಕಾರರ ಮನವೊಲಿಸಲು ಅಧಿಕಾರಿಗಳು ಹರ ಸಾಹಸ ಮಾಡಬೇಕಾಯಿತು. ಕೂಡಲೇ ಪರಿಹಾರ ಕಾರ್ಯಾಚರಣೆಯನ್ನು ಮಾಡುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ತಣ್ಣಗಾಗಿದ್ದಾರೆ. ಪರಿಹಾರ ನೀಡದಿದ್ದರೆ ಮತ್ತೊಮ್ಮೆ ಇದೇ ರೀತಿ ಪ್ರತಿಭಟನೆ ಮಾಡುತ್ತೇವೆ ಎಂದು ಹೆದರಿಸಿದ್ದಾರೆ.
ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಆದಿತ್ಯನಾಥ್ ಬುಧವಾರ ಭೇಟಿ ನೀಡಬೇಕಿತ್ತು. ಕಾರಣಾಂತರದಿಂದ ಕೊನೆ ಕ್ಷಣದಲ್ಲಿ ಭೇಟಿ ರದ್ದು ಮಾಡಿದ್ದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.