
ಡೆಹ್ರಾಡೂನ್ (ಡಿ.19): ಮುಸ್ಲಿಮ್ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷಗಳ ವಿರಾಮ ನೀಡುವ ತೀರ್ಮಾನ ಉತ್ತರಾಖಂಡ ಸರ್ಕಾರ ತೆಗೆದುಕೊಡಿದೆ.
ಭಾನುವಾರ ಮುಖ್ಯಮಂತ್ರಿ ಹರೀಶ್ ರಾವತ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮುಸ್ಲಿಮ್ ಉದ್ಯೋಗಿಗಳಿಗೆ ಶುಕ್ರವಾರ ಮಧ್ಯಾಹ್ನ 12.30ರಿಂದ 2 ಗಂಟೆಯವರೆಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ವಿರಾಮವಿರವುದು.
ಬಿಜೆಪಿ ವಿರೋಧ:
ಹರೀಶ್ ರಾವತ್ ಸರ್ಕಾರದ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ರಾವತ್ ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ತೊಡಗಿದ್ದಾರೆಂದು ಆರೋಪಿಸಿದೆ.
ಮುಸ್ಲಿಮರನ್ನು ದಾರಿತಪ್ಪಿಸುವ ಕಾಂಗ್ರೆಸ್’ನ ಹಳೆಯ ಸಂಪ್ರದಾಯವನ್ನು ಹರೀಶ್ ರಾವತ್ ಮುಂದುವರೆಸುತ್ತಿದ್ದಾರೆ. ಚುನಾವಣೆ ಮುಂಚೆ ಈ ಕ್ರಮ ಕೈಗೊಳ್ಳುವ ಹಿಂದೆ ಉದ್ದೇಶವೇನಿದೆ ಎಂದು ಬಿಜೆಪಿ ಮುಖಂಡ ಅನಿಲ್ ಬುಲಾನಿ ಹೇಳಿದ್ದಾರೆ.
ಆದರೆ ಕಾಂಗ್ರೆಸ್ ಪಕ್ಷ, ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.