ಗೋವಿಗೆ ರಾಷ್ಟ್ರ ಮಾತೆ ಸ್ಥಾನ : ವಿಧಾನಸಭೆ ನಿರ್ಣಯ

Published : Sep 20, 2018, 02:21 PM ISTUpdated : Sep 20, 2018, 03:18 PM IST
ಗೋವಿಗೆ ರಾಷ್ಟ್ರ ಮಾತೆ ಸ್ಥಾನ : ವಿಧಾನಸಭೆ ನಿರ್ಣಯ

ಸಾರಾಂಶ

ಗೋವಿಗೆ ರಾಷ್ಟ್ರಮಾತೆ ಸ್ಥಾನವನ್ನು ನೀಡುವ ನಿರ್ಣಯವನ್ನು ಉತ್ತರಾಖಂಡ್ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ.  ಪಶುಸಂಗೋಪನೆ ಸಚಿವೆ ರೇಖಾ ಆರ್ಯ ಅವರು, ಈ ಕುರಿತಾದ ನಿರ್ಣಯವನ್ನು ಪ್ರಸ್ತಾಪಿಸಿದರು.

ಡೆಹ್ರಾಡೂನ್: ಗೋವಿಗೆ ‘ರಾಷ್ಟ್ರ ಮಾತೆ’ ಸ್ಥಾನ ಮಾನ ನೀಡುವ ನಿರ್ಣಯವನ್ನು ಉತ್ತರಾಖಂಡ್ ವಿಧಾನಸಭೆ ಅಂಗೀಕರಿಸಿದೆ. ಬುಧವಾರದ ವಿಧಾನಸಭೆ ಅಧಿವೇಶನದಲ್ಲಿ ಪಶುಸಂಗೋಪನೆ ಸಚಿವೆ ರೇಖಾ ಆರ್ಯ ಅವರು, ಈ ಕುರಿತಾದ ನಿರ್ಣಯವನ್ನು ಪ್ರಸ್ತಾಪಿಸಿದರು.

 ಈ ವೇಳೆ ಕಾಂಗ್ರೆಸ್ ಶಾಸಕಿ ಹಾಗೂ ಪ್ರತಿಪಕ್ಷ ನಾಯಕಿಯೂ ಆದ ಇಂದಿರಾ ಹೃದಯೇಶ್ ಅವರು, ಗೋವಿಗೆ ‘ರಾಷ್ಟ್ರ ಮಾತೆ’ ಸ್ಥಾನಮಾನ  ನೀಡುತ್ತಿ ರುವುದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದರು.

ಇದಕ್ಕೆ ಸಚಿವೆ ರೇಖಾ, ‘ರಾಷ್ಟ್ರದಲ್ಲೇ ಗೋ ಹತ್ಯೆ ನಿಷೇಧಿಸಬೇಕು ಎಂಬುದು ನಮ್ಮ ಕಳಕಳಿಯಾಗಿದೆ,’ ಎಂದರು.

ಉತ್ತರಾಖಂಡ್ ಹೈ ಕೋರ್ಟ್ ಕಳೆದ ವರ್ಷ ಗಂಗಾ ಹಾಗೂ ಯಮುನಾ ನದಿಗೆ ಜೀವಂತ ವ್ಯಕ್ತಿಯ ಸ್ಥಾನಮಾನವನ್ನು ನೀಡಬೇಕು ಎಂದೂ ಕೂಡ ಹೇಳಿತ್ತು. ಅದರಂತೆ ಇದೀಗ ಇಲ್ಲಿನ ವಿಧಾನಸಭೆ ಗೋವಿನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. 

ಇಷ್ಟೇ ಅಲ್ಲದೇ ಕೆಲ ದಿನಗಳ ಹಿಂದೆ  ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಕಸಾಯಿಖಾನೆ ತೆರೆಯಬಾರದು. ಇದು ದೇವ ಭೂಮಿ ಎಂದೂ ಕೂಡ ಹೇಳಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ