
ನವದೆಹಲಿ (ಫೆ.12): ದೇಶವನ್ನು ಕೊಳ್ಳೆ ಹೊಡೆದವರನ್ನು ನಾನು ಸುಮ್ಮನೆ ಬಿಡುವುದಿಲ್ಲ. ನಿಮ್ಮ ಭವಿಷ್ಯವನ್ನು ನಾಶಮಾಡಿದವರಿಗೆ ಈ ಬಾರಿ ಚುನಾವಣೆಯಲ್ಲಿ ಸರಿಯಾಗಿ ಶಿಕ್ಷೆ ನೀಡಿ ಎಂದು ಪ್ರಧಾನಿ ಮೋದಿ ಉತ್ತರಖಂಡ ಜನತೆಗೆ ಕೇಳಿಕೊಂಡಿದ್ದಾರೆ.
ಸರ್ಜಿಕಲ್ ದಾಳಿ ನಡೆಸಿದಾಗ ಅದಕ್ಕೆ ಅವಮಾನ ಮಾಡಿದ ಕಾಂಗ್ರೆಸ್ ಗೆ ಸರಿಯಾಗಿ ಟಾಂಗ್ ನೀಡಿದ್ದಾರೆ. 40 ವರ್ಷಗಳಿಂದ ಓಆರ್ ಓಪಿ ಕೂಗು ಕೇಳಿ ಬರುತ್ತಿದ್ದರೂ ಕಾಂಗ್ರೆಸ್ ನಿದ್ದೆ ಮಾಡುತ್ತಿತ್ತು. ಕಳೆದ 60 ವರ್ಷಗಳಲ್ಲಿ ಭರೀ ಭ್ರಷ್ಟಾಚಾರವನ್ನು ನಡೆಸಿದೆ ಎಂದಿದ್ದಾರೆ.
ಕಳೆದ 70 ವರ್ಷಗಳಲ್ಲಿ ದೇಶವನ್ನು ಲೂಟಿ ಹೊಡೆದವರ ಸಮಯ ಅಂತ್ಯವಾಗಿದೆ. ದೇಶವನ್ನು ಕೊಳ್ಳೆದವರು ಬೆಲೆ ತೆತ್ತಲಿದ್ದಾರೆ ಎಂದು ನಾನು ಭರವಸೆ ನೀಡುತ್ತೇನೆ. ಒಂದೋ ನಾನು ವಿರಾಮ ತೆಗೆದುಕೊಳ್ಳುತ್ತೇನೆ ಇಲ್ಲಾ ದೇಶ ಲೂಟಿಕೋರರಿಗೆ ವಿರಾಮ ನೀಡುತ್ತೇನೆ. ಅಂತವರಿಗೆ ಪಾಠ ಕಲಿಸಲು ಪ್ರತಿಯೊಬ್ಬರಿಗೂ ಇದು ಸಕಾಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.