ಶ್ರೀನಿವಾಸಪ್ರಸಾದ್ ಬಿಜೆಪಿ ಸೇರ್ಪಡೆ ನಿಶ್ಚಿತ?

Published : Oct 29, 2016, 09:42 AM ISTUpdated : Apr 11, 2018, 01:04 PM IST
ಶ್ರೀನಿವಾಸಪ್ರಸಾದ್ ಬಿಜೆಪಿ ಸೇರ್ಪಡೆ ನಿಶ್ಚಿತ?

ಸಾರಾಂಶ

ಎಲ್ಲವೂ ಅಂದುಕೊಂಡಂತೆ ಆದ್ರೆ ನವೆಂಬರ್ ಮೊದಲ ವಾರದಲ್ಲಿ ಸ್ವಕ್ಷೇತ್ರ ನಂಜನಗೂಡಿನಲ್ಲಿ ಸಮಾವೇಶ ನಡೆಸಿ, ನಂತರ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪ್ರಸಾದ್ ಬಿಜೆಪಿ ಸೇರಲಿದ್ದಾರೆ.

ಬೆಂಗಳೂರು(ಅ. 29): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಬಿಜೆಪಿ ಸೇರುವುದು ನಿಶ್ಚಿತವಾಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಿರುವ ಪ್ರಸಾದ್, ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆಂದು ಆಪ್ತ ಮೂಲಗಳು ಹೇಳುತ್ತಿವೆ. ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್'ವೈ ನಿವಾಸಕ್ಕೆ ಹೋಗಲಿರುವ ಶ್ರೀನಿವಾಸಪ್ರಸಾದ್ ಅಲ್ಲಿ ಚರ್ಚೆ ನಡೆಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದ್ರೆ ನವೆಂಬರ್ ಮೊದಲ ವಾರದಲ್ಲಿ ಸ್ವಕ್ಷೇತ್ರ ನಂಜನಗೂಡಿನಲ್ಲಿ ಸಮಾವೇಶ ನಡೆಸಿ, ನಂತರ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪ್ರಸಾದ್ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೆ ವೇದಿಕೆ ಸಜ್ಜಾಗುತ್ತಿರುವುದರ ಜೊತೆಗೆ ಪ್ರಸಾದ್ ಜೊತೆ ನಂಜನಗೂಡು ಕ್ಷೇತ್ರದ ಅವರ ಬೆಂಬಲಿಗರು ಸಹ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಉದ್ದೇಶ ಇಲ್ಲ: ಮುಖಾಮುಖಿ ಸಂದರ್ಶನದಲ್ಲಿ ಸಚಿವ ಎಚ್‌.ಕೆ.ಪಾಟೀಲ್‌
ಅರ್ಹತೆ ಇದ್ದರೂ, ಇಲ್ಲದಿದ್ದರೂ ಹುದ್ದೆಗಳು ಸಿಗುತ್ತವೆ: ಸಚಿವ ಚಲುವರಾಯಸ್ವಾಮಿ ಹೇಳಿದ್ದೇನು?