ಶ್ರೀನಿವಾಸಪ್ರಸಾದ್ ಬಿಜೆಪಿ ಸೇರ್ಪಡೆ ನಿಶ್ಚಿತ?

By Suvarna Web DeskFirst Published Oct 29, 2016, 9:42 AM IST
Highlights

ಎಲ್ಲವೂ ಅಂದುಕೊಂಡಂತೆ ಆದ್ರೆ ನವೆಂಬರ್ ಮೊದಲ ವಾರದಲ್ಲಿ ಸ್ವಕ್ಷೇತ್ರ ನಂಜನಗೂಡಿನಲ್ಲಿ ಸಮಾವೇಶ ನಡೆಸಿ, ನಂತರ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪ್ರಸಾದ್ ಬಿಜೆಪಿ ಸೇರಲಿದ್ದಾರೆ.

ಬೆಂಗಳೂರು(ಅ. 29): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಬಿಜೆಪಿ ಸೇರುವುದು ನಿಶ್ಚಿತವಾಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಿರುವ ಪ್ರಸಾದ್, ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆಂದು ಆಪ್ತ ಮೂಲಗಳು ಹೇಳುತ್ತಿವೆ. ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್'ವೈ ನಿವಾಸಕ್ಕೆ ಹೋಗಲಿರುವ ಶ್ರೀನಿವಾಸಪ್ರಸಾದ್ ಅಲ್ಲಿ ಚರ್ಚೆ ನಡೆಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದ್ರೆ ನವೆಂಬರ್ ಮೊದಲ ವಾರದಲ್ಲಿ ಸ್ವಕ್ಷೇತ್ರ ನಂಜನಗೂಡಿನಲ್ಲಿ ಸಮಾವೇಶ ನಡೆಸಿ, ನಂತರ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪ್ರಸಾದ್ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೆ ವೇದಿಕೆ ಸಜ್ಜಾಗುತ್ತಿರುವುದರ ಜೊತೆಗೆ ಪ್ರಸಾದ್ ಜೊತೆ ನಂಜನಗೂಡು ಕ್ಷೇತ್ರದ ಅವರ ಬೆಂಬಲಿಗರು ಸಹ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

click me!