ಅವರ ಹೆಸರೇ ಅಟಲ್: ವಾಜಪೇಯಿ ಸ್ಮರಿಸಿದ ಮೋದಿ!

Published : Aug 20, 2018, 07:44 PM ISTUpdated : Sep 09, 2018, 09:31 PM IST
ಅವರ ಹೆಸರೇ ಅಟಲ್: ವಾಜಪೇಯಿ ಸ್ಮರಿಸಿದ ಮೋದಿ!

ಸಾರಾಂಶ

ವಾಜಪೇಯಿ ಸ್ಮರಿಸಿದ ಪ್ರಧಾನಿ ಮೋದಿ! ಅಟಲ್ ಸ್ಮರಣಾರ್ಥ ಪ್ರಾರ್ಥನಾ ಸಭೆ! ಅಟಲ್ ನೆನೆದು ಗದ್ಗದಿತರಾದ ಅಡ್ವಾಣಿ! ವಿಪಕ್ಷ ನಾಯಕರಿಂದಲೂ ಅಟಲ್ ಗುಣಗಾನ 

ನವದೆಹಲಿ(ಆ.20): ಭಾರತದ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ತಮ್ಮ ಬದುಕನ್ನು ಈ ದೇಶದ ಜನರಿಗಾಗಿ ಮುಡಿಪಾಗಿಟ್ಟಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಅಟಲ್ ಜೀಯವರ ಸ್ಮರಣಾರ್ಥ ನಡೆದ ಪ್ರಾರ್ಥನಾ ಸಭೆಯಲ್ಲಿ ಮಾತನಾಡಿದ ಮೋದಿ, ಭಾರತೀಯರ ಸೇವೆ ಮಾಡಲು ಅಟಲ್ ಯುವಕರಿದ್ದಾಗಲೇ ನಿರ್ಧರಿಸಿದ್ದರು ಎಂದು ಹೇಳಿದರು.

ಈ ದೇಶದಲ್ಲಿ ಕೇವಲ ಒಂದೇ ಒಂದು ಪಕ್ಷ ತನ್ನ ಪ್ರಾಬಲ್ಯ ಹೊಂದಿದ್ದಾಗ ಅಟಲ್ ರಾಜಕೀಯ ಜೀವನ ಪ್ರವೇಶಿಸಿದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಮರಿಸಿಕೊಂಡರು. ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಅವರು ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಆದರೆ ತಮ್ಮ ತತ್ವ, ಆದರ್ಶಗಳಿಗೆ ಅವರೆಂದೂ ರಾಜಿಯಾಗಿರಲಿಲ್ಲ ಎಂದು ಮೋದಿ ಅಭಿಪ್ರಾಯಪಟ್ಟರು. 

ಭಾರತವನ್ನು ಪ್ರಬಲ ಪರಮಾಣು ಶಕ್ತಿ ರಾಷ್ಟ್ರವನ್ನಾಗಿ ಮಾಡಲು ಅಟಲ್ ಅವರ ಅವಿರತ ಪರಿಶ್ರಮದಿಂದ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಳಾಗಿವೆ. ಅವರು ಯಾವುದೇ ಒತ್ತಡಗಳಿಗೆ ಎದೆಗುಂದಲಿಲ್ಲ ಎಂದು ಮೋದಿ ಸ್ಮರಿಸಿದರು.

ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಮಾತನಾಡಿ, ತಮ್ಮ ಬಹುಕಾಲದ ಸ್ನೇಹಿತನನ್ನು ನೆನೆದು ಗದ್ಗದಿತರಾದರು. ಇದೇ ವೇಳೆ ಪ್ರತಿಪಕ್ಷ ಮುಖಂಡರಾದ ಕಾಂಗ್ರೆಸ್ ನ ಗುಲಾಂ ನಬಿ ಆಜಾದ್, ಸಿಪಿಐ ಮುಖಂಡ ಡಿ. ರಾಜಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಎನ್‌ಸಿ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ, ಬಾಬಾ ರಾಮದೇವ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಬಾಗವತ್ ಕೂಡ ಮಾತನಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿದ್ಯಾರ್ಥಿಗಳೇ ತಂತ್ರಜ್ಞಾನ ಯುಗದಲ್ಲಿ ಪ್ರಶ್ನೆ ಮಾಡುವ ಧೈರ್ಯ ಬೆಳೆಸಿಕೊಳ್ಳಿ: ರಶ‍್ಮಿ ಮಹೇಶ್
ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಇನ್ನು 10 ಗಂಟೆ ಮುಂಚಿತವಾಗಿ ವೇಟಿಂಗ್‌ ಲಿಸ್ಟ್‌/RAC ಟಿಕೆಟ್‌ ಸ್ಟೇಟಸ್‌ ಚೆಕ್‌ ಮಾಡಬಹುದು..!