ರಾಜ್ಯ ಸರ್ಕಾರದಿಂದ ಏರಿಕೆಯಾಗುತ್ತಾ ST ಮೀಸಲು ?

Published : Jun 20, 2019, 09:23 AM IST
ರಾಜ್ಯ ಸರ್ಕಾರದಿಂದ ಏರಿಕೆಯಾಗುತ್ತಾ ST ಮೀಸಲು ?

ಸಾರಾಂಶ

ತಮ್ಮ ಸಮುದಾಯಕ್ಕೆ ಇರುವ ಮೀಸಲಾತಿ ಪ್ರಮಾಣವನ್ನು ಇನ್ನಷ್ಟು ಏರಿಕೆ ಮಾಡಲು ಇದೀಗ  ವಾಲ್ಮೀಕಿ ಸಮುದಾಯವು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಮಾಡಿದೆ. 

ಬೆಂಗಳೂರು [ಜೂ.20] :  ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 7 ಕ್ಕೆ ಹೆಚ್ಚಿಸಬೇಕೆಂದು ವಾಲ್ಮೀಕಿ ಸಮುದಾಯದ ಶಾಸಕರು, ಮುಖಂಡರ ನಿಯೋಗ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸುರಪುರ ಶಾಸಕ ರಾಜುಗೌಡ ನೇತೃತ್ವದಲ್ಲಿ ಮುಖ್ಯ ಮಂತ್ರಿ ಅವರನ್ನು ಭೇಟಿ ಮಾಡಿದ ನಿಯೋಗ, ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರ ಶೇ. 7 ರಷ್ಟು ಮೀಸಲಾತಿ ನೀಡಿದೆ. ಆದರೆ, ರಾಜ್ಯದಲ್ಲಿ ಕೇವಲ ಶೇ. 3 ರಷ್ಟು ಮೀಸಲಾತಿ ನೀಡಲಾಗಿದೆ. ಇದರಿಂದ ವಾಲ್ಮೀಕಿ ನಾಯಕ ಸಮುದಾಯ ಸೇರಿದಂತೆ ಪರಿಶಿಷ್ಟ ಪಂಗಡದಲ್ಲಿ ಬರುವ ಸಮುದಾಯಗಳಿಗೆ ಭಾರೀ ಅನ್ಯಾಯವಾ ಗುತ್ತಿದೆ. ಈ ಅನ್ಯಾಯ ಸರಿಪಡಿಸಲು ರಾಜ್ಯದಲ್ಲೂ ಪರಿಶಿಷ್ಟ ಪಂಗಡಕ್ಕೆ ಇರುವ ಮೀಸಲಾತಿ ಪ್ರಮಾಣವನ್ನು ಶೇ. 7 ಕ್ಕೆ ಹೆಚ್ಚಿಸಬೇಕು ಎಂದು ಕೋರಿದರು.

ಮುಖ್ಯಮಂತ್ರಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೂಗೌಡ, ರಾಜ್ಯ ಸರ್ಕಾರ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಸಮುದಾಯದ ಬೇಡಿಕೆ ಪರಿಗಣಿಸಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದೇವೆ. ಮುಖ್ಯ ಮಂತ್ರಿಗಳು ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.

ಮೀಸಲಾತಿ ಹೆಚ್ಚಳಕ್ಕಾಗಿ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಆರಂಭಗೊಂಡಿರುವ ಪಾದಯಾತ್ರೆ, ಜೂ. 24 ರಂದು ಬೆಂಗಳೂರು ತಲುಪಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhatkal: ಮರ ಏರಿ ಹರಕೆ ತೀರಿಸುವ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಶೇಡಬರಿ ಜಾತ್ರೆ
'ನಾಯಿ-ನರಿಗಳು ಕರವೇ ಬಗ್ಗೆ ಮಾತಾಡಿದ್ರೆ ಏನ್‌ ಹೇಳೋಕೆ ಆಗುತ್ತೆ..' ಸುದೀಪ್‌ ಭೇಟಿ ಕುರಿತ ವಿವಾದದ ಬಗ್ಗೆ ನಾರಾಯಣ ಗೌಡ ತಿರುಗೇಟು