
ವಾರಣಾಸಿ[ಫೆ.04]: ಗಂಗಾ ಶುದ್ಧೀಕರಣದ ಭಾಗವಾಗಿ ಇದೇ ಮೊದಲ ಬಾರಿಗೆ ನವೆಂಬರ್ನಿಂದ ಗಂಗಾ ನದಿಗೆ ವಾರಣಾಸಿ ನಗರದ ಒಳಚರಂಡಿ ಮಲಿನ ನೀರು ಸೇರುವುದು ನಿಲ್ಲಲಿದೆ.
1986 ಜೂನ್ 14 ರಂದು ಈ ಯೋಜನೆಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಚಾಲನೆ ನೀಡಿದ್ದರು. ಆದಾಗ್ಯೂ, ಅದು ಯಾವುದೇ ಪ್ರಗತಿ ಕಂಡಿರಲಿಲ್ಲ. ಆದರೆ ಮೋದಿ ಸರ್ಕಾರ ಬಂದ ನಂತರ ಹಮ್ಮಿಕೊಂಡ ನಮಾಮಿ ಗಂಗೆ ಯೋಜನೆ ಈಗ ಫಲ ನೀಡುತ್ತಿದ್ದು, ತ್ಯಾಜ್ಯ ಶುದ್ಧೀಕರಣ ಘಟಕ ನಿರ್ಮಿಸಲಾಗುತ್ತಿದೆ.
ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ