ವಾರ್ಧಾ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ 7 ಬಲಿ

Published : Dec 11, 2016, 09:06 PM ISTUpdated : Apr 11, 2018, 12:53 PM IST
ವಾರ್ಧಾ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ 7 ಬಲಿ

ಸಾರಾಂಶ

ಕರ್ನಾಟಕದ ಮೇಲೂ ಚಂಡಮಾರುತದ ಪರಿಣಾಮ ವ್ಯಕ್ತವಾಗಲಿದೆ. ಬೆಂಗಳೂರು, ಕೋಲಾರ ಮತ್ತು ಕೆಜಿಎಫ್ ಭಾಗಗಳಲ್ಲಿ ಡಿ. 13 ಮತ್ತು 14ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚೆನ್ನೈ(ಡಿ. 12): ವಾರ್ದಾ ಚಂಡಮಾರುತ ಚೆನ್ನೈಗೆ ಅಪ್ಪಳಿಸಿದೆ. ಗಂಟೆಗೆ 150 ಕಿಮೀ ವೇಗದಲ್ಲಿ ಚಂಡಮಾರುತವು ತಮಿಳುನಾಡಿನ ಕರಾವಳಿ ಭಾಗದಲ್ಲಿ ರೌದ್ರಾವತಾರ ತಾಳಿದೆ. ಚೆನ್ನೈನಲ್ಲಿ 7 ಮಂ ಸಾವನ್ನಪ್ಪಿರುವ ಬಗ್ಗೆ ವರದಿಗಳು ಬಂದಿವೆ.

ಚೆನ್ನೈ, ತಿರುವಳ್ಳೂರ್ ಮತ್ತು ಕಾಂಚೀಪುರಂನಲ್ಲಿ ಇಂದು ಸೋಮವಾರ ಬೆಳಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಗಾಳಿಯ ರಭಸಕ್ಕೆ ಸುಮಾರು 300 ಮರಗಳು 37 ವಿದ್ಯುತ್ ಕಂಬಗಳು ಧರೆಗುರುಳಿವೆ. 224 ರಸ್ತೆಗಳು ಅಸ್ತವ್ಯಸ್ಥಗೊಂಡಿವೆ. ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿವೆ. ಚೆನ್ನೈನ ಸಾಕಷ್ಟು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಭೂಕುಸಿತ ಸಂಭವಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಆಂಧ್ರದಿಂದ ಚೆನ್ನೈಗೆ ಓಡಾಡುವ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಚೆನ್ನೈ ಏರ್'ಪೋರ್ಟನ್ನು ರಾತ್ರಿ 9ಗಂಟೆವರೆಗೂ ಸ್ಥಗಿತಗೊಳಿಸಲಾಗಿದೆ.

ಉತ್ತರ ಉತ್ತರ ಚೆನ್ನೈ ಹಾಗೂ ತಿರುವಳ್ಳೂರು,ಮಲ್ಲಾಪುರಂ,ಕಾಂಚಿಪುರಂ ಜಿಲ್ಲೆಗಳಲ್ಲಿನ ತಗ್ಗು ಪ್ರದೇಶಗಳಲ್ಲಿರುವ  ಸುಮಾರು 8 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.ಬೇಳಿಗ್ಗೆ 7 ಗಂಟೆಯಿಂದೆ ಎಲ್ಲ ವಿಮಾನ ಹಾರಾಟಗಳನ್ನು ಹಾಗೂ ಚೆನ್ನೈ ಕೇಂದ್ರದಿಂದ ಹೊರಡುವ 17ರೈಲುಗಳನ್ನು ರದ್ದುಗೊಳಿಸಲಾಗಿದೆ.

ಎನ್'ಡಿಆರ್'ಎಫ್'ನ 15 ತಂಡಗಳು ತಮಿಳುನಾಡು ಹಾಗು ಆಂಧ್ರದ ಕರಾವಳಿ ಭಾಗಗಳಲ್ಲಿ ನಿಯೋಜನೆಯಾಗಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಪ್ರತೀ ತಂಡದಲ್ಲೂ 45 ಸಿಬ್ಬಂದಿ ಇದ್ದು, ತೀವ್ರತರವಾದ ನೈಸರ್ಗಿಕ ವಿಪತ್ತುಗಳನ್ನು ಎದುರಿಸುವ ತರಬೇತಿಯನ್ನು ಹೊಂದಿದವರಾಗಿದ್ದಾರೆ. ಎನ್'ಡಿಆರ್'ಎಫ್ ಜೊತೆಗೆ ಸೇನಾ ಸಿಬ್ಬಂದಿಯೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಇದೇ ವೇಳೆ, ತಮಿಳುನಾಡು ಸರಕಾರ ಕರಾವಳಿ ಭಾಗದ ಜನರಿಗೆ ಸಹಾಯವಾಣಿ ನಂಬರ್ ನೀಡಿದೆ.
044-25619206, 25619511, 25384965, 25383694, 25383694, 25367823, 25387570.

ಕರ್ನಾಟಕಕ್ಕೂ ಎಫೆಕ್ಟ್:
ಇದೇ ವೇಳೆ, ಕರ್ನಾಟಕದ ಮೇಲೂ ಚಂಡಮಾರುತದ ಪರಿಣಾಮ ವ್ಯಕ್ತವಾಗಲಿದೆ. ಬೆಂಗಳೂರು, ಕೋಲಾರ ಮತ್ತು ಕೆಜಿಎಫ್ ಭಾಗಗಳಲ್ಲಿ ಡಿ. 13 ಮತ್ತು 14ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಈ ಚಂಡಮಾರುತವು ಗೋವಾ ರಾಜ್ಯವನ್ನು ಮುಟ್ಟುವ ನಿರೀಕ್ಷೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಮ್ಮ ಅಥ್ವಾ ಸತ್ತವರ ಬ್ಯಾಂಕ್​ ಖಾತೆ ನಿಷ್ಕ್ರಿಯವಾಗಿದ್ರೆ ಚಿಂತೆ ಬೇಡ: ಕೂಡಲೇ ಹೀಗೆ ಮಾಡಿ ಹಣ ಪಡೆಯಿರಿ
ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌ ನೀಡಿದ ಇಲಾಖೆ, ಋತುಚಕ್ರ ರಜೆಗೆ ಗ್ರೀನ್‌ ಸಿಗ್ನಲ್‌!