
ನವದೆಹಲಿ(ಅ.20): ಶಸ್ತ್ರಾಸ್ತ್ರ ದಲ್ಲಾಳಿ ಆಭಿಷೇಕ್ ವರ್ಮ ಹಾಕಿದ ಬಲೆಯಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿ ಸಿಲುಕಿಕೊಂಡಿದ್ದಾರೆ. ವರುಣ್ ಗಾಂಧಿ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದು, ರಾಷ್ಟ್ರೀಯ ಭದ್ರತಾ ಮಾಹಿತಿಯನ್ನ ಸೋರಿಕೆ ಮಾಡಿದ್ದಾರೆ ಅಂತಾ ಪ್ರಧಾನಿ ಕಾರ್ಯಾಲಯಕ್ಕೆ ಮಾಹಿತಿಯನ್ನ ನೀಡಲಾಗಿದೆ.
ಅಮೆರಿಕದ ಮಾಹಿತಿ ಹಕ್ಕು ಕಾರ್ಯಕರ್ತನಾದ ಎಡ್ಮಂಡ್ ಅಲೆನ್, ವರುಣ್ ಗಾಂಧಿ ಹನಿಟ್ರ್ಯಾಪ್ ಬಲೆಗೆ ಬಿದ್ದಿರುವುದಕ್ಕೆ ಸಾಕ್ಷ್ಯಗಳನ್ನು ರಕ್ಷಣಾ ಸಚಿವ ಮನೋಹರ್ ಪರೀಕ್ಕರ್, ರಾಷ್ಟ್ರೀಯ ಭದ್ರತ ಸಲಹೆಹಾರ ಅಜಿತ್ ಧೂವಲ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮ್ಮ ಪತ್ರದಲ್ಲಿ ಮಾಹಿತಿಗೆ ಪೂರಕವಾದ ಆಧಾರಗಳಾದ ಸಿಡಿ ಮತ್ತು ಫೋಟೋಗಳನ್ನು ಸಹ ರವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.