
ನವದೆಹಲಿ: ಆರ್ಥಿಕ ಅಸಮಾನತೆ ಹೆಚ್ಚುತ್ತಿರುವುದರಿಂದ ಶ್ರೀಮಂತ ಸಂಸದರು ತಮ್ಮ ವೇತನ ತ್ಯಜಿಸಬೇಕು ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಪ್ರತಿಪಾದಿಸಿದ್ದಾರೆ.
ಸಂಸದರು ಶೇ.100ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದಾರೆ. ಆದರೆ 16ನೇ ಲೋಕಸಭೆಯ ಇನ್ನುಳಿದ ಅವಧಿಗೆ ಶ್ರೀಮಂತ ಸಂಸದರು ತಮ್ಮ ವೇತನವನ್ನು ಬಿಟ್ಟುಕೊಡುವ ಅಭಿಯಾನವನ್ನು ಆರಂಭಿಸಬೇಕು ಎಂದು ಸ್ಪೀಕರ್ ಅವರಲ್ಲಿ ನಾನು ಮನವಿ ಮಾಡುತ್ತೇನೆ’ ಎಂದು ವರುಣ್ಗಾಂಧಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಪತ್ರ ಬರೆದಿದ್ದಾರೆ.
ಭಾರತದಲ್ಲಿ ಆರ್ಥಿಕ ಅಸಮಾನತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಶೇ.1ರಷ್ಟು ಮಂದಿ ಶೇ.70ರಷ್ಟು ಸಂಪತ್ತನ್ನು ಹೊಂದಿದ್ದಾರೆ.
ಆದರೆ, 1930ರಲ್ಲಿ ಶೇ.21ರಷ್ಟು ಶ್ರೀಮಂತರು ಇಷ್ಟು ಸಂಪತ್ತನ್ನು ಹೊಂದಿದ್ದರು ಎಂದು ವರುಣ್ ಗಾಂಧಿಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.