
ಜೈಪುರ: ರಾಜಸ್ಥಾನದಲ್ಲಿ ಇತ್ತೀಚೆಗೆ ಸಾಲಬಾಧಿತ ರೈತನೊಬ್ಬ ಆತ್ಮಹತ್ಯೆಗೈದ ಬೆನ್ನಲ್ಲೇ, ಮುಖ್ಯಮಂತ್ರಿ ವಸುಂಧರಾ ರಾಜೇ ಅಲ್ಲಿನ 12,000ಕ್ಕೂ ಹೆಚ್ಚು ರೈತರ ಸಾಲ ಸಂಪೂರ್ಣ ಮನ್ನಾ ಮಾಡಿದ್ದಾರೆ.
ಕಾಂಗ್ರೆಸ್ನ ಸಾಂಪ್ರದಾಯಿಕ ಮತದಾರರಾದ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ದಕ್ಷಿಣ ರಾಜಸ್ಥಾನದ ಜಿಲ್ಲೆಗಳ ರೈತರ ಸಾಲ ಮನ್ನಾ ಮಾಡಲಾಗಿದೆ. ಇದರಿಂದ ರಾಜ್ಯದ ರೈತರ ಸಾಲ ಮನ್ನಾದ 8,000 ಕೋಟಿ ರು.ಗೆ, 100 ಕೋಟಿ ರು. ಹೆಚ್ಚುವರಿ ಹೊರೆಯಾಗಲಿದೆ.
ಚುನಾವಣೆಗೆ ಕೇವಲ ಮೂರು ತಿಂಗಳಿರುವಾಗ ಸಾಲಮನ್ನಾ ಘೋಷಿಸಲಾಗಿದೆ. ಇಂತಹ ಘೋಷಣೆಗಳು ಜಾರಿಯಾಗುವುದಿಲ್ಲ. ರೈತರಿಗೂ ಇದು ಗೊತ್ತು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.