ಮತ್ತೊಂದು ಬಂದ್ ಗೆ ವಾಟಾಳ್ ಕರೆ

Published : Jun 28, 2019, 07:50 AM IST
ಮತ್ತೊಂದು ಬಂದ್ ಗೆ ವಾಟಾಳ್ ಕರೆ

ಸಾರಾಂಶ

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇದೀಗ ಮತ್ತೊಂದು ಬಂದ್ ಗೆ ಕರೆ ನೀಡಿದ್ದಾರೆ. ಯಾವಾಗ? ಎಲ್ಲಿ?ಇಲ್ಲಿದೆ ಮಾಹಿತಿ 

ಬೆಂಗಳೂರು [ಜೂ.28] :  ಜಿಂದಾಲ್ ಕಂಪನಿಯ ಭ್ರಷ್ಟಾಚಾರದ ವಿರುದ್ಧ ಜು.6ರಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಡ್ಯಾಂ ಸೇತುವೆ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಿಂದಾಲ್‌ ಕಂಪನಿಗೆ 3667 ಎಕರೆ ಜಮೀನನ್ನು ಅಗ್ಗದ ದರದಲ್ಲಿ ನೀಡುತ್ತಿರುವುದರ ಬಗ್ಗೆ ಜು.15ರಂದು ತೋರಣಗಲ್ ಹತ್ತಿರ ಗಡಿನಾಡು ಕನ್ನಡಿಗರ ಸಮ್ಮೇಳನ ನಡೆಸಲಾಗುವುದು. ಇದೇ ಸಂದರ್ಭದಲ್ಲಿ ಜಿಂದಾಲ್‌ ಭ್ರಷ್ಟಾಚಾರದ ವಿರುದ್ಧ ಬಳ್ಳಾರಿ ಜಿಲ್ಲೆಯನ್ನು ಬಂದ್‌ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

1995ರಿಂದ ಇಲ್ಲಿಯವರೆಗೆ ಬಂದಂತಹ ಸರ್ಕಾರಗಳು 11,406 ಎಕರೆ ಜಾಗವನ್ನು ಜಿಂದಾಲ… ಕಂಪನಿಗೆ ನೀಡಿವೆ. ಬಳ್ಳಾರಿ ಜಿಲ್ಲೆ ಜಿಂದಾಲ… ಕಂಪನಿಯ ಹತೋಟಿಯಲ್ಲಿದೆ. ಬಳ್ಳಾರಿಯ ಸುತ್ತಮುತ್ತಲಿನ ರೈತರ ಜಮೀನೆಲ್ಲ ಕಂಪನಿಯ ಪಾಲಾಗಿದ್ದು, ಅಲ್ಲಿನ ವಾತಾವರಣ ಸಂಪೂರ್ಣವಾಗಿ ಹದಗೆಟ್ಟಿದೆ. ಜಿಂದಾಲ್‌ ಕಂಪನಿ ಸರ್ಕಾರಕ್ಕೆ ಒಂದೂವರೆ ಸಾವಿರ ಕೋಟಿ ತೆರಿಗೆ ವಂಚಿಸಿದೆ. ಈ ಕಂಪನಿಯಲ್ಲಿ ಕನ್ನಡಗರಿಗೆ ಉದ್ಯೋಗವನ್ನೂ ನೀಡಿಲ್ಲ. ಆದ್ದರಿಂದ ಕಂಪನಿ ವಿರುದ್ಧ ಹೋರಾಟ ಅನಿವಾರ್ಯಯವಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?