
ರಾಮನಗರ : ಅನಿವಾರ್ಯ ಕಾರಣಗಳಿಂದ ಕನ್ನಡ ಚಳುವಳಿ ಹೋರಾಟ ಗಾರ ವಾಟಾಳ್ ನಾಗರಾಜ್ ಅವರು ರಾಮನಗರ ಕ್ಷೇತ್ರದ ಉಪಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ನಿರ್ಧಾರ ದಿಂದ ಹಿಂದೆ ಸರಿದಿದ್ದಾರೆ.
ವಾಟಾಳ್ ನಾಗರಾಜ್ ಅವರ ಸ್ಪರ್ಧೆಗೆ ಜಿಲ್ಲೆಯ ಕೆಲವು ಕನ್ನಡಪರ ಸಂಘಟನೆಗಳ ಮುಖಂಡರು ಆಹ್ವಾನಿಸಿದ್ದರು. ಈ ನಿಟ್ಟಿನಲ್ಲಿ ರಾಮನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲು ಬಯಸಿದ್ದರು. ಆದರೆ ಸೋಮವಾರ ರಾತ್ರಿ 11 ಗಂಟೆಯ ನಂತರ ನಾಮಪತ್ರ ಸಲ್ಲಿಕೆ ಕೈ ಬಿಟ್ಟಿದ್ದಾರೆ.
ಇದೀಗ ವಾಟಾಳ್ ಅವರ ದಿಢೀರ್ ನಿರ್ಧಾರದಿಂದ ಕನ್ನಡಪರ ಸಂಘಟನೆಗಳ ಮುಖಂಡರು ಅಚ್ಚರಿಗೊಳಗಾಗಿದ್ದಾರೆ.
ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಎಂಎಲ್ ಸಿ ಹುದ್ದೆ ಅಮಿಷ ಬಂದಿರುವ ವದಂತಿ ಇದ್ದು, ಈ ನಿಟ್ಟಿನಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.