
ಬೆಂಗಳೂರು : ಕರ್ನಾಟಕದಲ್ಲಿ ನೂತನ ಬಾವುಟಕ್ಕೆ ಅಂಗೀಕಾರ ನೀಡಿದ ವಿಚಾರವಾಗಿ ಕನ್ನಡಪರ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗಾರಾಜ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಬಾವುಟದ ಇತಿಹಾಸ ಗೊತ್ತಿಲ್ಲದವರು. ಸರ್ಕಾರಿ ಬಾವುಟ ಮಾಡಲು ಹೊರಟಿದ್ದಾರೆ. ಹಳದಿ ಕೆಂಪು ಹಾಗೂ ಕರ್ನಾಟಕದ ಮಧ್ಯದಲ್ಲಿ ಪೈರು ಇರುವ ಬಾವುಟವನ್ನು ನಾವು ಮಾಡಿದ್ದೆವು. ಕರ್ನಾಟಕದ ಬಾವುಟಕ್ಕೆ ತುಂಬಾ ಇತಿಹಾಸವಿದೆ.
ನಾನು ಹಾಗೂ ರಾಮಮೂರ್ತಿ ಸೇರಿ ಬಾವುಟವನ್ನು ತಯಾರು ಮಾಡಿದ್ದೆವು. 1964ರಲ್ಲಿ ಬರೀ ಹಳದಿ ಹಾಗೂ ಕರ್ನಾಟಕದ ಚಿತ್ರ ಇತ್ತು. 1966ರಲ್ಲಿ ಹಳದಿ ಹಾಗೂ ಕೆಂಪು ಬಣ್ಣದ ಬಾವುಟವನ್ನು ರೆಡಿ ಮಾಡಿದೆವು. ಹಳದಿ ಹಾಗೂ ಕೆಂಪು ಬಾವುಟಕ್ಕೆ ಒಂದು ಶಕ್ತಿ ಬಂದಿತ್ತು.
ಜನರಲ್ಲಿ ಹಾಸುಹೊಕ್ಕಾಗಿತ್ತು. ಈ ಬಾವುಟ ಜನರ ಹೃದಯಕ್ಕೆ ಹತ್ತಿರವಾಗಿತ್ತು. ಇಂತಹ ಬಾವುಟವನ್ನು ಯಾವುದೇ ಸರ್ಕಾರ, ರಾಜಕಾರಣಿಗಳು, ಸಾಹಿತಿಗಳು ವಿರೋಧ ಮಾಡಿರಲಿಲ್ಲ. ವಿದೇಶಗಳಲ್ಲಿಯೂ ಈ ಬಾವುಟ ರಾರಾಜಿಸಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಹೊಸ ಬಾವುಟ ತರಲು ಹೊರಟಿದ್ದು, ಇದಕ್ಕೆ ನನ್ನ ಸಂಪೂರ್ಣ ವಿರೋಧವಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.