
ಬೆಂಗಳೂರು(ಜೂನ್ 11): ಕರ್ನಾಟಕ ಬಂದ್'ಗೆ ಬೆಂಬಲ ಕೊಡೋದಿಲ್ಲ ಎಂದು ಹೇಳುತ್ತಿರುವ ಅನೇಕ ಸಂಘಟನೆಗಳಿಗೆ ಪರಿಣಾಮ ನೆಟ್ಟಗಿರೋದಿಲ್ಲ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಬಸ್'ಗಳು ಸೋಮವಾರ ರಸ್ತೆಗೆ ಇಳಿದರೆ ಕಲ್ಲು ತೂರಾಟ ನಿಶ್ಚಿತ. ಹೋಟೆಲ್'ಗಳು ತೆರೆದಿದ್ದರೆ ತಿಂಡಿ ತಿಂದು ಹಣ ಕೊಡೋದಿಲ್ಲ ಎಂದು ಕನ್ನಡ ಚಳವಳಿಕಾರ ವಾರ್ನ್ ಮಾಡಿದ್ದಾರೆ.
ಮೇಕೆದಾಟು, ಮಹದಾಯಿ ಕಳಸಾ-ಭಂಡೂರಿ ಯೋಜನೆ, ಶಾಶ್ವತ ಕುಡಿಯುವ ನೀರು ಯೋಜನೆಗಳ ಶೀಘ್ರ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಲ ಕನ್ನಡಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್'ಗೆ ಕರೆಕೊಟ್ಟಿವೆ. ಆದರೆ, ಕನ್ನಡಪರ ಸಂಘಟನೆಗಳಲ್ಲೇ ಈ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ. ಅನೇಕ ಕನ್ನಡ ಸಂಘಟನೆಗಳು ಬಂದ್'ಗೆ ಬೆಂಬಲ ನೀಡದಿರಲು ನಿರ್ಧರಿಸಿವೆ. ಹೋಟೆಲ್ ಮಾಲೀಕರ ಸಂಘ, ಆಟೋ ಚಾಲಕರ ಸಂಘಗಳು ಕೂಡ ಬಂದ್'ಗೆ ಬೆಂಬಲ ನೀಡಿಲ್ಲ. ಈ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ವಿವಿಧ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ, ಬಹುತೇಕ ಸಂಘಟನೆಗಳ ಬೆಂಬಲ ಇಲ್ಲದೇ ಇರುವುದರಿಂದ ಸೋಮವಾರ ಬಂದ್'ನ ಬಿಸಿ ಕಡಿಮೆಯೇ ಇರಲಿದೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪೊಲೀಸ್ ಇಲಾಖೆ ನಾಳೆ ಸಾಕಷ್ಟು ಬಿಗಿಬಂದೋಬಸ್ತ್ ಏರ್ಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.