ಕರಾವಳಿಯಲ್ಲಿ ಭಾರಿ ಮಳೆ : ತುಂಬಿದ ನೇತ್ರಾವತಿಯ ಒಡಲು

Published : Jun 13, 2019, 11:27 AM ISTUpdated : Jun 13, 2019, 01:12 PM IST
ಕರಾವಳಿಯಲ್ಲಿ ಭಾರಿ ಮಳೆ :  ತುಂಬಿದ ನೇತ್ರಾವತಿಯ ಒಡಲು

ಸಾರಾಂಶ

ಈ ಬಾರಿ ಪೂರ್ವ ಮುಂಗಾರು ಕೊರತೆಯಿಂದ ಎಲ್ಲೆಡೆ ತೀವ್ರ ನೀರಿನ ಸಮಸ್ಯೆ ಎದುರಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಕಂಡು ಕೇಳರಿಯದ ರೀತಿಯಲ್ಲಿ ಬರಗಾಲ ಸ್ಥಿತಿಗೆ ತುತ್ತಾಗಿತ್ತು. ಆದರೆ ಈಗ ಮಳೆಯಿಲ್ಲದೇ ಕಾಲಿಯಾಗಿದ್ದ ನೇತ್ರಾವತಿ ಒಡಲು ಮೊದಲ ಮಳೆಗೆ ತುಂಬಿದೆ. 

ಮಂಗಳೂರು (ಜೂ.13) : ಧರ್ಮಸ್ಥಳ ಶ್ರೀ ಕ್ಷೇತ್ರದ ಜೀವನದಿಯಾಗಿದ್ದ ನೇತ್ರಾವತಿ ಬೇಸಿಗೆಯ ತಾಪಕ್ಕೆ ಸಂಪೂರ್ಣ ಬತ್ತಿ ಹೋಗಿತ್ತು. ಆದರೆ ಇದೀಗ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. 

ದಕ್ಷಿಣ ಕನ್ನಡದ ಜೀವನದಿ ಎಂದೇ ಬಿಂಬಿತವಾಗಿರುವ ನೇತ್ರಾವತಿ ಸಂಪೂರ್ಣ ಒಣಗಿ ಧರ್ಮಸ್ಥಳಕ್ಕೆ ಬರುವ ಭಕ್ತಾದಿಗಳು ಸಮಸ್ಯೆ ಎದುರಿಸುವಂತಾಗಿತ್ತು. ಕೆಲ ದಿನಗಳ ಕಾಲ ಭಕ್ತರ ಭೇಟಿಗೂ ನಿಷೇಧ ಹೇರಲಾಗಿತ್ತು. ಆದರೆ ಇದೀಗ ಮತ್ತೆ ನೇತ್ರಾವತಿ ಒಡಲು ತುಂಬಿದೆ. 

ವಾಯು ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿರುವ ಕರಾವಳಿ ತೀರಗಳು ತತ್ತರಿಸುತ್ತಿವೆ. ಮಂಗಳೂರು ಉಡುಪಿಯಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. 

ಬಿರುಗಾಳಿ ಸಹಿತವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ನಿರಂತರವಾಗಿ ಮಳೆಯಾಗುತ್ತಿದ್ದು  ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್