
ಕೊಚ್ಚಿ (ಆ. 20): ಪ್ರವಾಹಕ್ಕೆ ತಲ್ಲಣಿಸಿರುವ ಕೇರಳದಲ್ಲಿ ತರಕಾರಿ ಪದಾರ್ಥಗಳ ಕೊರೆಯುಂಟಾದ ಪರಿಣಾಮ ತರಕಾರಿಗಳ ಬೆಲೆಗಳು ಗಗನಕ್ಕೇರಿವೆ.
ಕೊಚ್ಚಿ ಸೇರಿದಂತೆ ಇತರ ಪ್ರಮುಖ ಪ್ರದೇಶಗಳಲ್ಲಿ ಕೆಲವು ತರಕಾರಿ ಅಂಗಡಿಗಳು ಕಾರ್ಯಾರಂಭ ಮಾಡಿದ್ದು, ಇಲ್ಲಿ ಪ್ರತಿ ಕೇಜಿ ಹಸಿ ಮೆಣಸಿನ ಕಾಯಿ 400 ರು.ಗೆ ಮಾರಾಟವಾಗುತ್ತಿದೆ. ಇನ್ನು ಈರುಳ್ಳಿ, ಆಲೂಗಡ್ಡೆ ಹಾಗೂ ಕ್ಯಾಬೇಜ್ ಸೇರಿದಂತೆ ಇತರ ತರಕಾರಿಗಳು ಕೇಜಿಗೆ 90 ರು.ಗೆ ಮಾರಾಟವಾಗುತ್ತಿವೆ. ಹಾಗಾಗಿ, ಸಾರ್ವಜನಿಕರ ಕೋರಿಕೆ ಮೇರೆಗೆ ಪೊಲೀಸರು ಮಧ್ಯಸ್ಥಿಕೆ ವಹಿಸಿದ್ದಾರೆ. ಆದಾಗ್ಯೂ, ಹಸಿ ಮೆಣಸಿನಕಾಯಿ ದರ ಮಾತ್ರ 120ರು.ಗಿಂತ ಕೆಳಗೆ ಇಳಿಯಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.