ಭಾಷಾ ಹೇರಿಕೆ, ವಿರೋಧಗಳೆರಡೂ ಸರಿಯಲ್ಲ: ಎಂ.ವೆಂಕಯ್ಯ ನಾಯ್ಡು

Published : Jul 14, 2019, 10:18 AM IST
ಭಾಷಾ ಹೇರಿಕೆ, ವಿರೋಧಗಳೆರಡೂ ಸರಿಯಲ್ಲ: ಎಂ.ವೆಂಕಯ್ಯ ನಾಯ್ಡು

ಸಾರಾಂಶ

ಭಾಷಾ ಹೇರಿಕೆ, ವಿರೋಧಗಳೆರಡೂ ತರವಲ್ಲ: ಎಂ.ವೆಂಕಯ್ಯ ನಾಯ್ಡು| ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲೇ ಸೂಕ್ತ: ಉಪರಾಷ್ಟ್ರಪತಿ

ಮೈಸೂರು[ಜು.14]: ಯಾವುದೇ ಭಾಷೆಯನ್ನು ಅನ್ಯಭಾಷಿಗರ ಮೇಲೆ ಹೇರಬಾರದು. ಅದೇ ರೀತಿಯಲ್ಲಿ ಯಾವುದೇ ಭಾಷಿಗರು ಬೇರೆ ಭಾಷೆಯನ್ನು ವಿರೋಧಿಸಬಾರದು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.

ನಗರದಲ್ಲಿ ಭಾರತೀಯ ಭಾಷಾ ಸಂಸ್ಥಾನದ ಸ್ವರ್ಣ ಜಯಂತಿ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಸಂವಿಧಾನದಡಿ 22 ಭಾಷೆಗಳನ್ನು ರಾಜ್ಯಾಡಳಿತ ಭಾಷೆಗಳೆಂದು ಗುರುತಿಸಲಾಗಿದ್ದು, ಪ್ರತಿಯೊಂದು ಭಾಷೆ ಅದರದ್ದೇ ಆದ ಮಹತ್ವ ಹೊಂದಿದೆ. ಹಿಂದಿ ಅಂದಾಕ್ಷಣ ಸಾರಾಸಗಟಾಗಿ ವಿರೋಧಿಸುವುದು ಸರಿಯಲ್ಲ. ಅದೇ ರೀತಿ ಹಿಂದಿಯನ್ನು ಹೇರಲೂಬಾರದು. ಹಿಂದಿಯನ್ನು ರಾಷ್ಟ್ರದ ಬಹುಪಾಲು ಪ್ರದೇಶದವರು ಮಾತನಾಡುವುದರಿಂದ ಇತರರು ಹಿಂದಿ ಕಲಿಯಲು ಅಡ್ಡಿಯಿಲ್ಲ ಎಂದರು. ಇದೇವೇಳೆ ಎಲ್ಲೇ ಹೋದರೂ ಮಾತೃಭಾಷೆ ಮರೆಯಬಾರದು ಎಂದು ಅಭಿಪ್ರಾಯಪಟ್ಟಅವರು ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷಾ ಮಾಧ್ಯಮದಲ್ಲಿಯೇ ಸಿಗುವಂತೆ ಮಾಡುವ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಚಿಂತಿಸಬೇಕಾಗಿದೆ ಎಂದು ಸಲಹೆ ನೀಡಿದರು.

ಇದೇವೇಳೆ ಸರ್ಕಾರಿ ಅಧಿಕಾರಿಗಳು ಹಿಂದಿ ಅಥವಾ ಇಂಗ್ಲಿಷ್‌ಗೆ ಬದಲಾಗಿ ಕನ್ನಡದಲ್ಲಿ ವ್ಯವಹರಿಸಿದಾಗ ಜನರಿಗೆ ಅನುಕೂಲವಾಗುತ್ತದೆ. ಅದೇ ರೀತಿ ಹೈಕೋರ್ಟ್‌ಗಳು ನೀಡುವ ವ್ಯಾಜ್ಯಗಳ ತೀರ್ಪುಗಳು ಸ್ಥಳೀಯ ಭಾಷೆಯಲ್ಲಿದ್ದರೆ ಕಕ್ಷಿದಾರರಿಗೆ ಸರಳವಾಗಿ ಅರ್ಥವಾಗುತ್ತದೆ. ನಾನು ರಾಜ್ಯಸಭೆಯಲ್ಲಿ ಮಾತನಾಡುವ ಸಂಸದರಿಗೆ ತಮ್ಮ ತಮ್ಮ ಮಾತೃಭಾಷೆಯಲ್ಲಿಯೇ ಮಾತನಾಡಲು ಅವಕಾಶ ನೀಡುತ್ತೇನೆ. ಅನುವಾದಿಸಿ ನಾನೂ ಕೇಳಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಉಪರಾಷ್ಟ್ರಪತಿಯಾಗುವ ಮೊದಲು ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದ ಅವರು ಕನ್ನಡದಲ್ಲೇ ಮಾತು ಪ್ರಾರಂಭಿಸಿದರು. ಭಾಷಣದುದ್ದಕ್ಕೂ ಹಿಂದಿ, ಇಂಗ್ಲಿಷ್‌ ಮತ್ತು ತಮ್ಮ ಮಾತೃಭಾಷೆಯಾದ ತೆಲುಗಿನಲ್ಲಿಯೂ ಉಕ್ತಿಗಳನ್ನು ಉಚ್ಚರಿಸಿ ವಿದ್ಯಾರ್ಥಿಗಳ ಮನಗೆದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?
ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!