ವೆಂಕಯ್ಯ ನಾಯ್ಡು ‘ಫ್ಯಾಷನ್‌' ಹೇಳಿಕೆಗೆ ವ್ಯಾಪಕ ಆಕ್ರೋಶ

Published : Jun 24, 2017, 01:52 PM ISTUpdated : Apr 11, 2018, 01:11 PM IST
ವೆಂಕಯ್ಯ ನಾಯ್ಡು ‘ಫ್ಯಾಷನ್‌' ಹೇಳಿಕೆಗೆ ವ್ಯಾಪಕ ಆಕ್ರೋಶ

ಸಾರಾಂಶ

ರೈತರ ಸಾಲ ಮನ್ನಾ ಒಂದು ರೀತಿ ಫ್ಯಾಷನ್‌ ಆಗುತ್ತಿದೆ' ಎಂಬ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿಕೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ, ಆಕ್ಷೇಪ ವ್ಯಕ್ತವಾಗಿದೆ.  

ಬೆಂಗಳೂರು: ‘ರೈತರ ಸಾಲ ಮನ್ನಾ ಒಂದು ರೀತಿ ಫ್ಯಾಷನ್‌ ಆಗುತ್ತಿದೆ' ಎಂಬ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿಕೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ, ಆಕ್ಷೇಪ ವ್ಯಕ್ತವಾಗಿದೆ.

ವೆಂಕಯ್ಯ ನಾಯ್ಡು ಅವರ ಮನೆ ಮುಂದೆ ಬ್ಯಾಂಕ್‌ನವರು ತಮಟೆ ಬಾರಿಸಿದ್ದರೆ, ಅವರ ಬಾಯಿಂದ ಆ ಮಾತು ಬರುತ್ತಿರಲಿಲ್ಲ ಎಂದು ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಕೋಲಾರದಲ್ಲಿ ವ್ಯಂಗ್ಯವಾಡಿದ್ದಾರೆ.

ಇನ್ನು, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಉತ್ತರಪ್ರದೇಶ, ಮಹಾರಾ ಷ್ಟ್ರಗಳಲ್ಲಿ ಬಿಜೆಪಿ ಸರ್ಕಾರ ಸಾಲ ಮನ್ನಾ ಮಾಡಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಯ್ಡು ಹೇಳಿಕೆ ಸಂಕಷ್ಟದಲ್ಲಿರುವ ಬಡ ರೈತರಿಗೆ ಮಾಡಿರುವ ಅವಮಾನ ಎಂದು ಕೃಷ್ಣ ಭೈರೆಗೌಡ ಟೀಕಿಸಿದ್ದಾರೆ. ರೈತ ಸಂಘದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್
ಆನ್‌ಲೈನ್ ಆರ್ಡರ್ ಮಾಡಿದ್ರೆ ಕೇಕ್ ಮೇಲೆ ಹೀಗಾ ಬರೆಯೋದು?: ಕೇಕ್ ಮೇಲಿನ ಬರಹ ನೋಡಿ ಬರ್ತ್‌ಡೇ ಗರ್ಲ್ ಶಾಕ್