ಅತೃಪ್ತರಿಗೆ ವೇಣುಗೋಪಾಲ್ ಖಡಕ್ ಎಚ್ಚರಿಕೆ

Published : Jun 15, 2018, 07:27 AM IST
ಅತೃಪ್ತರಿಗೆ  ವೇಣುಗೋಪಾಲ್ ಖಡಕ್ ಎಚ್ಚರಿಕೆ

ಸಾರಾಂಶ

ಎಲ್ಲರ ಅಹವಾಲನ್ನು ಸಮಾಧಾನ ಚಿತ್ರದಿಂದ ಆಲಿಸಿದ ವೇಣುಗೋಪಾಲ್‌ ನಿಮ್ಮ ಎಲ್ಲಾ ಅಹವಾಲುಗಳನ್ನೂ ಹೈಕಮಾಂಡ್‌ ಗಮನಕ್ಕೆ ತರುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ಪ್ರತ್ಯೇಕ ಸಭೆ ಮತ್ತು ಭಿನ್ನಮತೀಯ ಚಟುವಟಿಕೆ ನಡೆಸಬೇಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರು: ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ, ಸಿ.ಎಸ್‌. ಶಿವಳ್ಳಿ ಸೇರಿದಂತೆ ಸಚಿವ ಸ್ಥಾನ ದೊರಕದ ಅತೃಪ್ತ ಶಾಸಕರು ಗುರುವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಈ ವೇಳೆ ಎಲ್ಲರ ಅಹವಾಲನ್ನು ಸಮಾಧಾನ ಚಿತ್ರದಿಂದ ಆಲಿಸಿದ ವೇಣುಗೋಪಾಲ್‌ ನಿಮ್ಮ ಎಲ್ಲಾ ಅಹವಾಲುಗಳನ್ನೂ ಹೈಕಮಾಂಡ್‌ ಗಮನಕ್ಕೆ ತರುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ಪ್ರತ್ಯೇಕ ಸಭೆ ಮತ್ತು ಭಿನ್ನಮತೀಯ ಚಟುವಟಿಕೆ ನಡೆಸಬೇಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಾ ಬರುತ್ತಿದ್ದ ಅತೃಪ್ತರಿಗೆ ಕೈ ಕಟ್ಟಿಹಾಕಿದಂತಾಗಿದೆ. ಶುಕ್ರವಾರದಿಂದ ಅತೃಪ್ತ ಶಾಸಕರು ಸಭೆ ನಡೆಸುವುದರಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದ್ದು, ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ಅತೃಪ್ತ ಬಣದ ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ, ಸಿ.ಎಸ್‌.ಶಿವಳ್ಳಿ, ತನ್ವೀರ್‌ ಸೇಠ್‌, ಪರಮೇಶ್ವರ್‌ ನಾಯಕ್‌, ವಿ.ಮುನಿಯಪ್ಪ ಸೇರಿದಂತೆ ಹಲವು ಶಾಸಕರು ಗುರುವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ತಮಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಒಬ್ಬೊಬ್ಬರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

ಸಮಾಧಾನದಿಂದಲೇ ಎಲ್ಲರ ಅಹವಾಲು ಆಲಿಸಿದ ವೇಣುಗೋಪಾಲ್‌ ಅವರು, ಎಲ್ಲರ ಅಹವಾಲನ್ನೂ ಹೈಕಮಾಂಡ್‌ ಗಮನಕ್ಕೆ ತರುತ್ತೇನೆ. ಆದರೆ, ನೀವು ಪ್ರತ್ಯೇಕ ಸಭೆ, ಭಿನ್ನಮತೀಯ ಚಟುವಟಿಕೆ ನಡೆಸಿ ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಕೆಲಸ ಮಾಡಬಾರದು ಎಂದು ತಾಕೀತು ಮಾಡಿದರು.

ನಾನು ಆಕಾಂಕ್ಷಿ ಅಲ್ಲ:  ಈ ವೇಳೆ ವೇಣುಗೋಪಾಲ್‌ ಬೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್‌, ‘ನಾನು ಸಚಿವ ಸ್ಥಾನದ ಅಕಾಂಕ್ಷಿ ಅಲ್ಲ. ನಾನು ಯಾವ ಶಾಸಕರ ಜತೆಯೂ ಸಭೆ ನಡೆಸಲ್ಲ. ನಾಳೆ ಎಲ್ಲೂ ಸಭೆ ನಡೆಸುತ್ತಿಲ್ಲ. ವೇಣುಗೋಪಾಲ್‌ ನಮ್ಮನ್ನು ಕರೆದಿದ್ದಾರೆ. ಅದಕ್ಕೆ ಹೋಗುತ್ತಿದ್ದೇವೆ ಎಂದರು.

ವೇಣುಗೋಪಾಲ್‌ ಅವರು ಮಾತನಾಡಿ, ಎಂ.ಬಿ ಪಾಟೀಲ್‌ ಮತ್ತು ಸತೀಶ್‌ ಜಾರಕಿಹೊಳಿ ಜತೆ ಮಾತುಕತೆ ನಡೆಸಿದ್ದೇನೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಹಿರಿಯ ಶಾಸಕರಿಗೆ ಅಸಮಾಧಾನ ಆಗಿದೆ. ಅದರೆ ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರಿಗೂ ಸಚಿವ ಸ್ಥಾನ ಕೊಡಲು ಆಗುವುದಿಲ್ಲ. ಇಂದಿನಿಂದ ಯಾವುದೇ ಪ್ರತ್ಯೇಕ ಸಭೆ ಮಾಡಬೇಡಿ ಎಂದು ಹೇಳಿದ್ದೇನೆ. ಸೂಕ್ತ ಸಮಯದಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ. ಅಸಮಾಧಾನಿತರನ್ನು ಸಮಾಧಾನ ಪಡಿಸುವ ಶಕ್ತಿ ಕಾಂಗ್ರೆಸ್‌ಗೆ ಇದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ: ವೀಡಿಯೋ ಭಾರಿ ವೈರಲ್
ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು