ಐಎನ್‌ಎಸ್‌ ವಿರಾಟ್‌ ನೌಕೆ ಒಡೆಯಲು ಸರ್ಕಾರ ನಿರ್ಧಾರ!: ಮಾಜಿ ಯೋಧರ ವಿರೋಧ

Published : Jul 03, 2019, 09:18 AM IST
ಐಎನ್‌ಎಸ್‌ ವಿರಾಟ್‌ ನೌಕೆ ಒಡೆಯಲು ಸರ್ಕಾರ ನಿರ್ಧಾರ!: ಮಾಜಿ ಯೋಧರ ವಿರೋಧ

ಸಾರಾಂಶ

ಐಎನ್‌ಎಸ್‌ ವಿರಾಟ್‌ ನೌಕೆ ಒಡೆಯಲು ಸರ್ಕಾರ ನಿರ್ಧಾರ| ಐತಿಹಾಸಿಕ ನೌಕೆ ಒಡೆಯಲು ಮಾಜಿ ಯೋಧರ ವಿರೋಧ

ನವದೆಹಲಿ[ಜು.03]: ಈಗಾಗಲೇ ಸೇವೆಯಿಂದ ಹಿಂದಕ್ಕೆ ಪಡೆಯಲಾಗಿರುವ ಐಎನ್‌ಎಸ್‌ ವಿರಾಟ್‌ ಯುದ್ಧ ನೌಕೆಯನ್ನು ಯಾವುದೇ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ಬದಲು ಒಡೆಯಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಆದರೆ, ಈ ನಿರ್ಧಾರಕ್ಕೆ ನೌಕಾಪಡೆಯ ಮಾಜಿ ಯೋಧರಿಂದ ಆಕ್ಷೇಪ ವ್ಯಕ್ತವಾಗಿದೆ.

ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್‌ ನಾಯಕ್‌, ಐಎನ್‌ಎಸ್‌ ವಿರಾಟ್‌ ಅನ್ನು ಯಾವುದೇ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವುದಿಲ್ಲ. ನೌಕೆಯನ್ನು ನಿರ್ವಹಿಸುವ ಯೋಗ್ಯ ಹಣಕಾಸು ಪ್ರಸ್ತಾವನೆಯನ್ನು ಸರ್ಕಾರ ಸ್ವೀಕರಿಸದೇ ಇರುವ ಕಾರಣಕ್ಕೆ ಹಾಗೂ ಸುರಕ್ಷತೆ, ಭದ್ರತೆಯ ದೃಷ್ಟಿಯಿಂದ ಐಎನ್‌ಎಸ್‌ ವಿರಾಟ್‌ ನೌಕೆಯನ್ನು ಒಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. 30 ವರ್ಷ ಸೇವೆ ಸಲ್ಲಿಸಿದ್ದ ಐಎನ್‌ಎಸ್‌ ವಿರಾಟ್‌ ನೌಕೆ, 2017ರಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಇದೇ ವೇಳೆ ಐತಿಹಾಸಿಕ ಐಎನ್‌ಎಸ್‌ ವಿರಾಟ್‌ ಭಾರತದ ರಾಜತಾಂತ್ರಿಕ ಸಂಸ್ಕೃತಿ ಹಾಗೂ ಭಾರತದ ಹೆಗ್ಗುರುತಾಗಿದ್ದು, ನೌಕೆಯನ್ನು ಉಳಿಸಿಕೊಳ್ಳಬೇಕು. ಇದಕ್ಕಾಗಿ ಸರ್ಕಾರ ಸಂಪನ್ಮೂಲ ಕ್ರೋಢೀಕರಿಸಬೇಕು ಎಂದು ರಾಜಂತಾಂತ್ರಿಕ ವ್ಯವಹಾರಗಳ ತಜ್ಞ (ನಿವೃತ್ತ ಯೋದ) ಸಿ. ಉದಯ್‌ ಭಾಸ್ಕರ್‌ ಹೇಳಿದ್ದಾರೆ. ಮಾಜಿ ನೌಕಾ ಮುಖ್ಯಸ್ಥ ಅರುಣ್‌ ಪ್ರಕಾಶ್‌ ಕೂಡ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ನೌಕೆಯನ್ನು ಮ್ಯೂಸಿಯಂ ಮತ್ತು ಮನರಂಜನಾ ತಾಣವಾಗಿ ಅಭಿವೃದ್ಧಿಪಡಿಸಲು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಈ ಹಿಂದೆ ಕೋರಿಕೆ ಸಲ್ಲಿಸಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ