ಡ್ರೈವರ್ ಮುಸ್ಲಿಂ ಎಂಬ ಕಾರಣಕ್ಕೆ ಕ್ಯಾಬ್ ಕ್ಯಾನ್ಸಲ್ ಮಾಡಿದ ವಿಎಚ್’ಪಿ ಮುಖಂಡ

Published : Apr 23, 2018, 12:05 PM IST
ಡ್ರೈವರ್ ಮುಸ್ಲಿಂ ಎಂಬ ಕಾರಣಕ್ಕೆ ಕ್ಯಾಬ್ ಕ್ಯಾನ್ಸಲ್ ಮಾಡಿದ ವಿಎಚ್’ಪಿ ಮುಖಂಡ

ಸಾರಾಂಶ

ಉತ್ತರ ಪ್ರದೇಶದ ವಿಶ್ವ ಹಿಂದೂ ಪರಿಷತ್ ಸಾಮಾಜಿಕ ಜಾಲತಾಣ ನಿರ್ವಾಹಕ  ಇದೀಗ ವಿವಾದವೊಂದಕ್ಕೆ ಕಾರಣವಾಗಿದ್ದಾರೆ.

 ಲಕ್ನೋ : ಉತ್ತರ ಪ್ರದೇಶದ ವಿಶ್ವ ಹಿಂದೂ ಪರಿಷತ್ ಸಾಮಾಜಿಕ ಜಾಲತಾಣ ನಿರ್ವಾಹಕ  ಇದೀಗ ವಿವಾದವೊಂದಕ್ಕೆ ಕಾರಣವಾಗಿದ್ದಾರೆ.

ಪ್ರಯಾಣಕ್ಕಾಗಿ ಓಲಾ ಕ್ಯಾಬ್ ಬುಕ್ ಮಾಡಿದ್ದ ಅಭಿಷೇಕ್ ಮಿಶ್ರಾ ಚಾಲಕ ಮುಸ್ಲಿಂ ಎನ್ನುವ ಕಾರಣಕ್ಕೆ ಕ್ಯಾಬ್ ರದ್ದು ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಅಭಿಷೇಕ್ ಟ್ವೀಟ್ ಮಾಡಿ ಮುಸ್ಲಿಂ ಚಾಲಕನಾದ್ದರಿಂದಲೇ ಕ್ಯಾಬ್ ಕ್ಯಾನ್ಸಲ್ ಮಾಡಿದ್ದಾಗಿ ಬರೆದುಕೊಂಡಿದ್ದಾರೆ. ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಅಲ್ಲದೇ ತಾನು ಜಿಹಾದಿಗಳಿಗೆ ಎಂದಿಗೂ ತನ್ನ ಹಣವನ್ನು ನೀಡುವುದಿಲ್ಲ ಎಂದೂ ಕೂಡ ಅವರು ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಪ್ರತಿಯಾಗಿ ಟ್ವೀಟ್ ಮಾಡಿರುವ ಓಲಾ ಕಂಪನಿಯು ಇಂತಹ ವ್ಯಕ್ತಿತ್ವವನ್ನೂ ಎಂದಿಗೂ ಕೂಡ ಬೆಂಬಲಿಸುವುದಿಲ್ಲ. ನಮ್ಮದು ಸರ್ವಧರ್ಮ ಸಮನ್ವಯ ರಾಷ್ಟ್ರ ಎಂದು ಹೇಳಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?