ನೌಕಾಪಡೆಯ ನೂತನ ಮುಖ್ಯಸ್ಥರ ನೇಮಕ ವಿವಾದ: ಅರ್ಜಿ ಹಿಂಪಡೆದ ಬಿಮಲ್ ವರ್ಮಾ!

Published : Apr 09, 2019, 07:56 PM ISTUpdated : Apr 09, 2019, 07:58 PM IST
ನೌಕಾಪಡೆಯ ನೂತನ ಮುಖ್ಯಸ್ಥರ ನೇಮಕ ವಿವಾದ: ಅರ್ಜಿ ಹಿಂಪಡೆದ ಬಿಮಲ್ ವರ್ಮಾ!

ಸಾರಾಂಶ

ನೌಕಾಪಡೆಯ ನೂತನ ಮುಖ್ಯಸ್ಥರ ನೇಮಕ ವಿವಾದ| ಅರ್ಜಿ ಹಿಂಪಡೆದ ವೈಸ್‌ ಅಡ್ಮಿರಲ್‌ ವಿಮಲ್‌ ವರ್ಮಾ| ನ್ಯಾಯಮಂಡಳಿಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ವರ್ಮಾ| ಸಂಪುಟ ನೇಮಕಾತಿ ಸಮಿತಿಗೆ ಅರ್ಜಿ ಸಲ್ಲಿಸಲು ನಿರ್ಧಾರ| ಎಸಿಸಿಗೆ ಅರ್ಜಿ ಸಲ್ಲಿಸುವಂತೆ ಖುದ್ದು ನ್ಯಾಯಮಂಡಳಿ ಸೂಚನೆ| ಕರಮ್‌ಬೀರ್‌ ಸಿಂಗ್‌ ನೇಮಕ ಪ್ರಶ್ನಿಸಿ ನ್ಯಾಯಮಂಡಳಿ ಮೊರೆ ಹೋಗಿದ್ದ ವಿಮಲ್‌ ವರ್ಮಾ|

ನವದೆಹಲಿ(ಏ.09): ಮಹತ್ವದ ಬೆಳವಣಿಗೆಯೊಂದರಲ್ಲಿ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್‌ ಅಡ್ಮಿರಲ್‌ ಕರಮ್‌ಬೀರ್‌ ಸಿಂಗ್‌ ಅವರ ನೇಮಕ ಪ್ರಶ್ನಿಸಿ, ವೈಸ್‌ ಅಡ್ಮಿರಲ್‌ ಬಿಮಲ್‌ ವರ್ಮಾ ಸಶಸ್ತ್ರ ಪಡೆಗಳ ನ್ಯಾಯಮಂಡಳಿಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವರ್ಮಾ ಪರ ವಕೀಲ ಅಂಕೂರ್ ಚಿಬ್ಬರ್, ಮೊದಲು ಈ ಪ್ರಕರಣವನ್ನು ಸಂಪುಟ ನೇಮಕಾತಿ ಸಮಿತಿ(ಎಸಿಸಿ)ಗೆ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಎಸಿಸಿ ಪ್ರಕರಣದ ವಿಚಾರಣೆ ನಡೆಸದಿದ್ದರೆ ಮತ್ತೆ ಹೊಸದಾಗಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸುವುದಾಗಿ ಚಿಬ್ಬರ್ ಸ್ಪಷ್ಟಪಡಿಸಿದ್ದಾರೆ.

ವರ್ಮಾ ಸಲ್ಲಿಸಿದ್ದ ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮಂಡಳಿ, ಮೊದಲು ಕೇಂದ್ರ ಸರ್ಕಾರದ ನೇಮಕಾತಿ ಸಮಿತಿಯನ್ನು ಸಂಪರ್ಕಿಸುವಂತೆ ಸೂಚನೆ ನೀಡಿತ್ತು.

ಸರ್ಕಾರ ತಮ್ಮ ಸೇವಾ ಹಿರಿತನವನ್ನು ಕಡೆಗಣಿಸಿ ನೌಕಾಪಡೆಯ ಮುಖ್ಯಸ್ಥರಾಗಿ ಕರಮ್‌ಬೀರ್‌ ಸಿಂಗ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿ ವರ್ಮಾ ನಿನ್ನೆ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!