ಸಚಿನ್ ನಾಯಕ್ ವಿರುದ್ಧ ಕ್ರಮಕೈಗೊಳ್ಳಲು ಸಿಎಂಗೆ ಮನವಿ

Published : Jan 21, 2017, 03:36 PM ISTUpdated : Apr 11, 2018, 01:13 PM IST
ಸಚಿನ್ ನಾಯಕ್ ವಿರುದ್ಧ ಕ್ರಮಕೈಗೊಳ್ಳಲು ಸಿಎಂಗೆ ಮನವಿ

ಸಾರಾಂಶ

ಹಣ ಕಳೆದುಕೊಂಡವರಲ್ಲಿ ಕೆಲವರು ಇಂದು ಬೆಳಗ್ಗೆ ಸಿಎಂ ಕಚೇರಿ ಕೃಷ್ಣಗೆ ತೆರಳಿ ಅಳಲು ತೋಡಿಕೊಂಡರು. ನೊಂದವರ ಅಳಲು ಕೇಳಿಸಿಕೊಂಡ ಸಿಎಂ ಈ ಸಂಬಂಧ ಕ್ರಮಕೈಗೊಳ್ಳಲು ಗೃಹ ಸಚಿವರು ಹಾಗೂ ನಗರ ಪೊಲೀಸ್​ ಆಯುಕ್ತರಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಬೆಂಗಳೂರು (ಜ.21): ಸುವರ್ಣ ನ್ಯೂಸ್ ವರದಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗಳ ತಲುಪಿದೆ. ಮನೆ ಹಾಗೂ ಸೈಟ್​​ ನೀಡುವುದಾಗಿ ನೂರಾರು ಕೋಟಿ ರೂಪಾಯಿ ಹಣ ವಂಚಿಸಿರುವ ಟಿಜಿಎಸ್​​, ಡ್ರೀಮ್ಸ್​​ ಜಿಕೆ ಕಂಪನಿ ಮಾಲಿಕ ಸಚಿನ್ ನಾಯಕ್ ವಿರುದ್ಧ  ಕ್ರಮಕೈಗೊಳ್ಳುವಂತೆ ನೊಂದವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ್ದಾರೆ.

ಹಣ ಕಳೆದುಕೊಂಡವರಲ್ಲಿ ಕೆಲವರು ಇಂದು ಬೆಳಗ್ಗೆ ಸಿಎಂ ಕಚೇರಿ ಕೃಷ್ಣಗೆ ತೆರಳಿ ಅಳಲು ತೋಡಿಕೊಂಡರು. ನೊಂದವರ ಅಳಲು ಕೇಳಿಸಿಕೊಂಡ ಸಿಎಂ ಈ ಸಂಬಂಧ ಕ್ರಮಕೈಗೊಳ್ಳಲು ಗೃಹ ಸಚಿವರು ಹಾಗೂ ನಗರ ಪೊಲೀಸ್​ ಆಯುಕ್ತರಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಅಲ್ಲದೆ, ಇಂದು ಬೆಳಗ್ಗೆ ಇದೇ ತಂಡ ಗೃಹ ಸಚಿವ ಜಿ.ಪರಮೇಶ್ವರ್​​ ಅವರ ನಿವಾಸಕ್ಕೂ ಭೇಟಿ ಮಾಡಿ ಮನವಿ ಸಲ್ಲಿಸಲು ಮುಂದಾಗಿದ್ದರು. ಗೃಹ ಸಚಿವರು ತಮ್ಮ ಕಚೇರಿ ಬಂದು ಮನವಿ ಸಲ್ಲಿಸುವಂತೆ ಸೂಚಸಿ ತೆರಳಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!