ಎಸ್ಪಿ-ಕಾಂಗ್ರೆಸ್ ಮೈತ್ರಿಯಿಂದ ಭಾರೀ ಗೆಲುವು

Published : Feb 04, 2017, 01:30 PM ISTUpdated : Apr 11, 2018, 01:11 PM IST
ಎಸ್ಪಿ-ಕಾಂಗ್ರೆಸ್ ಮೈತ್ರಿಯಿಂದ ಭಾರೀ ಗೆಲುವು

ಸಾರಾಂಶ

ಎಸ್ಪಿ-ಕಾಂಗ್ರೆಸ್ ಮೈತ್ರಿಯು ಈ ಬಾರಿ ಚುನಾವಣೆಯಲ್ಲಿ ದೊಡ್ಡ ಮಟ್ಟದ ಗೆಲುವನ್ನು ತಂದುಕೊಡಲಿದ್ದು, 403 ಸ್ಥಾನಗಳಲ್ಲಿ 300 ಸ್ಥಾನಗಳನ್ನು ಗೆದ್ದು ಬಹುಮತದೊಂದಿಗೆ ಸರ್ಕಾರ ರಚಿಸಲು ಸಾಧ್ಯವಾಗುವುದು ಎಂದು ಅಖಿಲೇಶ್ ಯಾದವ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಔರಯ್ಯ/ಉತ್ತರ ಪ್ರದೇಶ (ಫೆ.04): ಎಸ್ಪಿ-ಕಾಂಗ್ರೆಸ್ ಮೈತ್ರಿಯು ಈ ಬಾರಿ ಚುನಾವಣೆಯಲ್ಲಿ ದೊಡ್ಡ ಮಟ್ಟದ ಗೆಲುವನ್ನು ತಂದುಕೊಡಲಿದ್ದು, 403 ಸ್ಥಾನಗಳಲ್ಲಿ 300 ಸ್ಥಾನಗಳನ್ನು ಗೆದ್ದು ಬಹುಮತದೊಂದಿಗೆ ಸರ್ಕಾರ ರಚಿಸಲು ಸಾಧ್ಯವಾಗುವುದು ಎಂದು ಅಖಿಲೇಶ್ ಯಾದವ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದು ಕೇವಲ ರಾಜ್ಯದ ಚುನಾವಣೆಯಲ್ಲ. ದೇಶಕ್ಕೆ ಸಂಬಂಧಿಸಿದ ಚುನಾವಣೆ. ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಮ್ಮ ವಿರುದ್ಧ ಪಿತೂರಿ ಮಾಡುವವರನ್ನು ದೂರವಿಟ್ಟು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಅಪ್ಪ-ಮಗನ ಸಂಬಂಧದ ಬಗ್ಗೆ ಮಾತನಾಡುತ್ತಾ, ಸಮಾಜವಾದಿ ಪಕ್ಷ ಯಾವಾಗಲೂ ನೇತಾಜಿ ಜೊತೆಯಿರುತ್ತದೆ. ಪಕ್ಷ ಹಾಗೂ ಮುಲಾಯಂ ಸಿಂಗ್ ನಡುವಿನ ಸಂಬಂಧ ಬದಲಾಗುವುದಿಲ್ಲ. ನಮ್ಮನ್ನು ರಾಜಕೀಯಕ್ಕೆ ತಂದು ತರಬೇತುಗೊಳಿಸಿದವರು ಅವರು. ನಮ್ಮ ಅವರ ನಡುವಿನ ಸಂಬಂಧವನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ