ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

Feb 15, 2019, 10:14 PM IST

ನವದೆಹಲಿ(ಫೆ.15): ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ ಪಾಕ್ ಬೆಂಬಲಿತ ಜೈಶ್-ಎ-ಮೊಹ್ಮದ್ ಸಂಘಟನೆಯ ಕೈವಾಡ ಇದ್ದರೆ, ಇಡೀ ಪಾಕಿಸ್ತಾನಕ್ಕೆ ಯಾಕೆ ಬೈಬೇಕು ಎಂದು ಸಿಧು ಪ್ರಶ್ನಿಸಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇಶದ ಜನತೆ, ಸಿಧುಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....