
ಮಂಗಳೂರು(ಅ.09): ಬಂಟ್ವಾಳ ತಾಲೂಕಿನ ವಿಟ್ಲದ ಪೆರಾಜೆ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯರ ಜೊತೆ ವಾಗ್ವಾದ ನಡೆಸಿದ ದೃಶ್ಯ ಮೊಬೈಲ್'ನಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಎಎಸ್ಐ ರುಕ್ಮಯ್ಯ ಗೌಡ ಅವರು ತಮ್ಮ ಕೊಂಕಣಪದವು ಎಂಬಲ್ಲಿ ಇರುವ ಜಮೀನಿನಲ್ಲಿ ಈ ವಾಗ್ವಾದಲ್ಲಿ ಭಾಗಿಯಾಗಿದ್ದಾರೆ. ಈ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ ಎಂದು ರುಕ್ಮಯ್ಯ ಗೌಡರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಜಮೀನಿಗೆ ನುಗ್ಗಬಹುದು ಎಂಬ ಕಾರಣಕ್ಕೆ ಕೈಯಲ್ಲಿ ಕತ್ತಿ ಹಿಡಿದುಕೊಂಡೇ ಎಎಸ್'ಐ ವಾಗ್ವಾದದಲ್ಲಿ ನಿರತಾಗಿದ್ದರು.
ಈ ಕುರಿತ ದೃಶ್ಯ ವಾಟ್ಸ್'ಆಪ್'ನಲ್ಲಿ ಹರಿದಾಡುತ್ತಿದ್ದು, ಎಸ್ಪಿ ಭೂಷಣ್ ಬೊರಸೆ ಅವರಿಗೂ ದೂರು ನೀಡಲಾಗಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿರುವ ಎಸ್ಪಿ ಬೊರಸೆ, ತನಿಖೆಯ ಜವಾಬ್ದಾರಿಯನ್ನು ಡಿವೈಎಸ್ಪಿ ರವೀಶ್ ಅವರಿಗೆ ವಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.