ಲಂಚದ ಆರೋಪ: ಲಕ್ಷ್ಮೀಗೆ ಯಡಿಯೂರಪ್ಪ ಸವಾಲ್!

Sep 30, 2018, 5:03 PM IST

ಬಿಜೆಪಿಯಿಂದ ಲಂಚದ ಆಮಿಷ ಬಂದಿತ್ತು ಎಂದಿದ್ದ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೆಬ್ಬಾಳ್ಕರ್ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಅವರ ಬಗ್ಗೆ ಗೌರವವಿದೆ. ತಮ್ಮ ಆರೋಪದಲ್ಲಿ ಸತ್ಯಾಂಶವಿದ್ದರೆ, ಯಾರು ಆಮಿಷ ನೀಡಿದ್ದರೋ ಅವರ ಹೆಸರನ್ನು ಬಹಿರಂಗಪಡಿಸಲಿ ಎಂದು ಸವಾಲೆಸೆದಿದ್ದಾರೆ.